24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

ಮಚ್ಚಿನ: ಇತಿಹಾಸ ಪ್ರಸಿದ್ಧ ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಜರಗುವ ಬ್ರಹ್ಮಕಲಶ ವಾರ್ಷಿಕ ದಿನಾಚರಣೆ ಮತ್ತು ವಾರ್ಷಿಕ ಮೇಷ ಜಾತ್ರಾ ಮಹೋತ್ಸವವು ಏ. 23ದಿಂದ ಮೇ.2ರವರೆಗೆ ಜರಗಲಿದೆ.

ಏ.23ರಂದು ಸೀಯಾಳಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ ಗಂಟೆ 6.30ರಿಂದ ಧ್ವಜಾರೋಹಣ, ಮಹಾಪೂಜೆ, ಉತ್ಸವ, ವಸಂತ ಸೇವೆ ನಡೆಯಿತು. ಏ. 24 ಮಹಾಪೂಜೆ, ಏಕಾದಶಿ, ರಾತ್ರಿ ಗಂಟೆ 7ರಿಂದ ಮಹಾಪೂಜೆ, ಉತ್ಸವ ನಡೆಯಿತು.

ಏ. 25ರಂದು ಮಧ್ಯಾಹ್ನ ಮಹಾಪೂಜೆ , ಸಾಯಂ. ಗಂಟೆ 4ರಿಂದ ಶ್ರೀ ದೇವಳದಿಂದ ಭಂಡಾರ ಹೊರಟು ಪಿಲಿಚಾಮುಂಡಿ ದೈವದ ನೇಮ, ಸಂಜೆ ಗಂಟೆ 6.30ರಿಂದ ಮಹಾಪೂಜೆ, ಉತ್ಸವ, ಏ. 26ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಸಾಯಂ. ಗಂಟೆ 6ರಿಂದ ಕೊಪ್ಪರಿಗೆ ಏರಿಸುವುದು, ಬಯ್ಯದ ಬಲಿ ಪ್ರಾರಂಭ, ವಸಂತ ಸೇವೆ, ಏ.27ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ ಗಂಟೆ 7ರಿಂದ ಕೆರೆ ಆಯನ, ಉತ್ಸವ, ಮಹಾಪೂಜೆ. ಏ.28ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಾಯಂ. ಗಂಟೆ 4ರಿಂದ ಉತ್ಸವ, ಮೂಡುಕಟ್ಟೆ ಸವಾರಿ, ವಸಂತ ಸೇವೆ, ಮಹಾಪೂಜೆ. ಏ. 29ರಂದು ಪೂರ್ವಾಹ್ನ ಗಂಟೆ 7ರಿಂದ ಬ್ರಹ್ಮಕಲಶ ದಿನಾಚರಣೆ ಪ್ರಯುಕ್ತ ಗಣಯಾಗ, ಏಕದಶಾರುದ್ರಾಭಿಷೇಕ, ಪವಮಾನಹೋಮ, ಆಶ್ಲೇಷ ಬಲಿ, ಶ್ರೀ ಅನಂತೇಶ್ವರ ಸ್ವಾಮಿಗೆ ವಿಶೇಷ ಕಲಶಾಭಿಷೇಕ, ಶ್ರೀ ಗಣಪತಿ ದೇವರಿಗೆ ಕಟಾಹ ಅಪೂಪ ನೈವೇದ್ಯ ಸಮರ್ಪಣೆ ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಸಾಯಂ. ಗಂಟೆ 7ರಿಂದ ಚಂದ್ರಮಂಡಲೋತ್ಸವ ವಸಂತ ಸೇವೆ, ಮಹಾಪೂಜೆ. ಏ. 30ರಂದು ಪೂರ್ವಾಹ್ನ ಗಂಟೆ 7ರಿಂದ ದರ್ಶನ ಬಲಿ ಸಾಯಂ. ಗಂಟೆ 6ರಿಂದ ಮಹಾರಥೋತ್ಸವ, ಮಹಾಪೂಜೆ, ಶ್ರೀಭೂತ ಬಲಿ, ಮೇ 1ಪ್ರಾತಃಕಾಲ ಕವಾಟೋದ್ಘಾಟನೆ, ವಸಂತ ಸೇವೆ ಮಧ್ಯಾಹ್ನ 11ರಿಂದ ತುಲಾಭಾರ ಸೇವೆ, ಮಹಾಪೂಜೆ, ಅನ್ನಸಂತರ್ಪಣೆ, ಸಾಯಂ. ಗಂಟೆ 4ರಿಂದ ಅವಭ್ರತ ರಾತ್ರಿ 8ರಿಂದ ಧ್ವಜಾವರೋಹಣ, ಮಹಾಪೂಜೆ. ಮೇ. 2ರಂದು ಮಹಾಸಂಪ್ರೋಕ್ಷಣೆ, ತುಲಾಭಾರ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

Related posts

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!