September 6, 2026
Uncategorized

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ವತಿಯಿಂದ ಪಹಾಲ್ ಗಾಮ್ ಧಾಳಿ ಯ ಬಗ್ಗೆ ಖಂಡನಾ ಸಭೆ ಹಾಗೂ ಶ್ರದ್ಧಾಂಜಲಿ ಸಭೆ ನಡೆಯಿತು.

ಪಹಾಲ್ ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರು ಹಾಗೂ ಅಮಾಯಕರ ಮೇಲೆ ನಡೆಸಿದ ದಾಳಿ ಬಗ್ಗೆ ವಕೀಲರ ಸಂಘವು ಸಭೆಯನ್ನು ನಡಿಸಿ ಅತ್ಯುಗ್ರವಾಗಿ ಖಂಡಿಸಿದೆ. ಸಭೆಯಲ್ಲಿ ಹಿರಿಯ ವಕೀಲರಾದ ಸುಬ್ರಮಣ್ಯ ಕುಮಾರ್ ಅಗರ್ತ ಮಾತನಾಡುತ್ತ ಈ ತರಹದ ಕೃತ್ಯಗಳು ನಡೆದಾಗ ನಾವೆಲ್ಲರು ಜಾತಿ, ಧರ್ಮ, ಪಕ್ಷ ಹಾಗೂ ಮನಸ್ತಾಪಗಳನ್ನು ಮರೆತು ಒಗ್ಗಟ್ಟಾಗಿ ಖಂಡಿಸಿ ನಾವು ಸರಕಾರದ ಜೊತೆ ದೇಶದ ಜೊತೆ ನಿಲ್ಲಬೇಕು ಎಂದು ತಮ್ಮ ಮಾತಲ್ಲಿ ತಿಳಿಸಿದರು. ಹಿರಿಯ ವಕೀಲರಾದ ಶಿವಕುಮಾರ್ ಎಸ್ ಎಂ ಮಾತನಾಡುತ್ತ ಇದು ನಮ್ಮ ದೇಶದ ಮೇಲೆ ಆಗಿರುವ ದಾಳಿಯಾಗಿದೆ. ಪ್ರವಾಸೋದ್ಯಮ ಉತ್ತುಂಗಲ್ಲಿರುವಾಗ ಅದನ್ನು ಸಹಿಸದೆ ಈ ಕೃತ್ಯ ಎಸಗಲಾಗಿದೆ. ನಾವು ಎಲ್ಲರೂ ಒಂದಾಗಿ ಇದನ್ನು ಖಂಡಿಸ ಬೇಕಾಗಿದೆ ಎಂದರು.ಅಧ್ಯಕ್ಷರಾದ ವಸಂತ ಮರಕಡ ಈ ಕೃತ್ಯವನ್ನು ಖಂಡಿಸುತ್ತಾ ಈ ದಾಳಿಯು ನಮ್ಮ ದೇಶದ ಮೇಲೆ ಹೇಡಿಗಳು ಮಾಡಿರುವ ದಾಳಿಯಾಗಿದೆ, ಇದರ ಬಗ್ಗೆ ವಾಟ್ಸಪ್ಪ್, ಫೇಸ್ಬುಕ್ ಗಳಲ್ಲಿ ದಾಳಿಕೊರರರು ಮಾಡಿರುವ ಕೃತ್ಯವನ್ನು ಸಮರ್ಥಿಸುವವರನ್ನು ಸಮಾಜ ಬಹಿಷ್ಕರಿಸಬೇಕು, ಖಂಡಿಸ್ಬೇಕು ಅವರೆಲ್ಲರೂ ದೇಶದ್ರೋಹಿಗಳು ಎಂದು ಹೇಳಿದರು.

ವೇದಿಕೆಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾದ ಅಶೋಕ್ ಕರಿಯನೆಲ ಉಪಸ್ಥಿತರಿದ್ದರು. ಪ್ರಾಸ್ತಾವಿಕವಾಗಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ.ಕೆ ಮಾತನಾಡಿದರು.

ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ಹಿರಿಯ ಕಿರಿಯ ವಕೀಲರಗಳು, ಸರಕಾರಿ ವಕೀಲರುಗಳು ಹಾಜರಿದ್ದರು.

Related posts

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya
error: Content is protected !!