31.4 C
ಪುತ್ತೂರು, ಬೆಳ್ತಂಗಡಿ
April 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿ

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

ಬೆಳ್ತಂಗಡಿ: ಮನೆಯಲ್ಲಿ ಜನರು ನಿದ್ರಿಸುತ್ತಿರುವಾಗಲೇ ಕಳ್ಳತನ ನಡೆಸಿ ಚಿನ್ನಾಭರಣ ಸಹಿತ ನಗದುಗಳನ್ನು ದೋಚಿಕೊಂಡು ಹೋದ ಘಟನೆ ತೆಕ್ಕಾರು ಎಂಬಲ್ಲಿ ಎ.23ರಂದು ರಾತ್ರಿ ಸಂಭವಿಸಿದೆ.

ತೆಕ್ಕಾರುವಿನ ಗುತ್ತು ಮನೆ ನಿವಾಸಿ ಮುಸ್ತಫಾ ರವರ ಮನೆಗೆ ಹೊಕ್ಕ ಕಳ್ಳರು ಹಿಂಬದಿ ಬಾಗಿಲಿನಿಂದ ಚಿಲಕ ತೆರೆದು ಮನೆಯೊಳಗೆ ಹೊಕ್ಕಿ ಸುಮಾರು 5 ಪವನ್ ನಷ್ಟು ಚಿನ್ನ ಮೂರು ಸಾವಿರ ರೂ ನಗದುಗಳನ್ನು ಕಳವುಗೈದು ಪರಾರಿಯಾಗಿದ್ದಾರೆ.

ಮನೆಯವರ ಹೇಳಿಕೆಯಂತೆ ನಿನ್ನೆ ಸುಮಾರು ಮೂರರಿಂದ ನಾಲ್ಕುಗಂಟೆ ಹೊತ್ತಿಗೆ ಮನೆ ಕಳ್ಳತನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮುಸ್ತಫಾ ರವರ ಮನೆಗೆ ನೆಂಟರು ಬಂದಿದ್ದು ನೆಂಟರಿಷ್ಟರ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಅದೇ ವೇಳೆ ಅವರ ಬ್ಯಾಗ್ ಗಳನ್ನು ಎತ್ತಿಕೊಂಡು ಹೋಗಿದ್ದು ಪಕ್ಕದ ಅಂಗಳದಲ್ಲಿ ದೋಚಿ ಬಿಸಾಕಿ ಹೋಗಿದ್ದಾರೆ.

ಇದೇ ಸಂದರ್ಭದಲ್ಲಿ ತೆಕ್ಕಾರುವಿನ ಕೋಡಿ ನಿವಾಸಿ ಅನ್ವರ್ ಎಂಬವರ ಮನೆಗೂ ಕಳ್ಳರು ನುಗ್ಗಿದ್ದು ಮನೆಯೊಳಗಡೆ ಕಪಾಟ್ ನ ಒಳಗಡೆಯಿದ್ದ ನಗದನ್ನು ದೋಚಿಕೊಂಡಿದ್ದು ಆದರೆ ಆಕಸ್ಮಾತ್ ಅವರ ಜೇಬಿಗೆ ಹಾಕುವ ಹಣವು ಕೆಳಗಡೆ ಬಿದ್ದಿದ್ದು ಬೆಳಿಗ್ಗೆ ಹೊತ್ತು ಮನೆಯ ಯಜಮಾನಿ ನೀರು ಕುಡಿಯಲೆಂದು ಎದ್ದಾಗ ಕಳ್ಳತನ ನಡೆದ ಬಗ್ಗೆ ಅರಿವಾಗಿದೆ. ಮನೆಯ ಹಿಂಬಾಗಿಲು ತೆರೆದ ಸ್ಥಿತಿಯಲ್ಲಿದ್ದು ದೋಚಿದ ಮೂರು ಸಾವಿರ ಹಣ ಅಂಗಳದಲ್ಲಿ ಬಿದ್ದು ಸಿಕ್ಕಿದೆ ಎಂದು ಅನ್ವರ್ ಮನೆಯವರು ತಿಳಿಸಿದ್ದಾರೆ.

ಇದೇ ರೀತಿ ತೆಕ್ಕಾರು ವ್ಯಾಪ್ತಿಯ ಹಲವು ಮನೆಗಳಲ್ಲಿ ಕಳ್ಳತನ ನಡೆದಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ಹೆಚ್ಚಿನ ವಿವರಗಳು ಹೊರ ಬರಬೇಕಿದೆ.

Related posts

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya
error: Content is protected !!