September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

ಬೆಳ್ತಂಗಡಿ: ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಕಿರೀಟವೆನಿಸಿದ ಶಾರದ ಮಾತೆಯ ನೆಲೆವೀಡಾದ ಜಮ್ಮು- ಕಾಶ್ಮೀರವನ್ನು ಸಂರಕ್ಷಿಸಿ ಆರ್ಟಿಕಲ್ 370 ರದ್ದುಗೊಳಿಸುವ ಮತ್ತು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಲು ತೆಗೆದುಕೊಂಡ ದಿಟ್ಟ ಕ್ರಮದ ಪರಿಣಾಮ ಜಮ್ಮು ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಬಂದಿರೋದರಿಂದ ಉಗ್ರರು ಹತಾಶರಾಗಿ ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹೇಡಿತನದ ಉಗ್ರರ ದಾಳಿಗೆ ಬಲಿಯಾಗಿರುವವರ ಸಾವು ಅತ್ಯಂತ ನೋವು ತಂದಿದೆ. ಮೃತರ ಕುಟುಂಬಗಳಿಗೆ ಈ ದಾರುಣ ಘಟನೆಯ ಆಘಾತ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮುಂದಿನ ದಿನಗಳಲ್ಲಿ ಇಂತಹ ಹತಾಶ ಉಗ್ರರ ರಣಹೇಡಿ ಕೃತ್ಯಗಳು ಮರುಕಳಿಸದಂತೆ ಕೇಂದ್ರ ಸರ್ಕಾರದಿಂದ ಉಗ್ರರಿಗೆ ದಿಟ್ಟ ಸಂದೇಶ ರವಾನೆಯಾಗಲಿ ಹಾಗೆಯೇ ಎಕ್ಸಾಮ್ ಸಂದರ್ಭದಲ್ಲಿ ಜನಿವಾರ ಕಳಚಿದ ಕೃತ್ಯ ನಡೆಸಿದವರಿಗೂ ರಾಜ್ಯ ಸರಕಾರ ದಿಟ್ಟ ಕ್ರಮ ಕೈಗೊಂಡು ಶಿಕ್ಷೆ ನೀಡಬೇಕೆಂದು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ಮತ್ತು ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ, ಯುವವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ತಾಜೆ ಹಾಗೂ ಕಾರ್ಯದರ್ಶಿಗಳು ಎಲ್ಲಾ ಪದಾಧಿಕಾರಿಗಳು ಮತ್ತು ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya
error: Content is protected !!