July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

ಮಚ್ಚಿನ: ಇತಿಹಾಸ ಪ್ರಸಿದ್ಧ ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಜರಗುವ ಬ್ರಹ್ಮಕಲಶ ವಾರ್ಷಿಕ ದಿನಾಚರಣೆ ಮತ್ತು ವಾರ್ಷಿಕ ಮೇಷ ಜಾತ್ರಾ ಮಹೋತ್ಸವವು ಏ. 23ದಿಂದ ಮೇ.2ರವರೆಗೆ ಜರಗಲಿದೆ.

ಏ.23ರಂದು ಸೀಯಾಳಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ ಗಂಟೆ 6.30ರಿಂದ ಧ್ವಜಾರೋಹಣ, ಮಹಾಪೂಜೆ, ಉತ್ಸವ, ವಸಂತ ಸೇವೆ ನಡೆಯಿತು. ಏ. 24 ಮಹಾಪೂಜೆ, ಏಕಾದಶಿ, ರಾತ್ರಿ ಗಂಟೆ 7ರಿಂದ ಮಹಾಪೂಜೆ, ಉತ್ಸವ ನಡೆಯಿತು.

ಏ. 25ರಂದು ಮಧ್ಯಾಹ್ನ ಮಹಾಪೂಜೆ , ಸಾಯಂ. ಗಂಟೆ 4ರಿಂದ ಶ್ರೀ ದೇವಳದಿಂದ ಭಂಡಾರ ಹೊರಟು ಪಿಲಿಚಾಮುಂಡಿ ದೈವದ ನೇಮ, ಸಂಜೆ ಗಂಟೆ 6.30ರಿಂದ ಮಹಾಪೂಜೆ, ಉತ್ಸವ, ಏ. 26ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಸಾಯಂ. ಗಂಟೆ 6ರಿಂದ ಕೊಪ್ಪರಿಗೆ ಏರಿಸುವುದು, ಬಯ್ಯದ ಬಲಿ ಪ್ರಾರಂಭ, ವಸಂತ ಸೇವೆ, ಏ.27ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ ಗಂಟೆ 7ರಿಂದ ಕೆರೆ ಆಯನ, ಉತ್ಸವ, ಮಹಾಪೂಜೆ. ಏ.28ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಾಯಂ. ಗಂಟೆ 4ರಿಂದ ಉತ್ಸವ, ಮೂಡುಕಟ್ಟೆ ಸವಾರಿ, ವಸಂತ ಸೇವೆ, ಮಹಾಪೂಜೆ. ಏ. 29ರಂದು ಪೂರ್ವಾಹ್ನ ಗಂಟೆ 7ರಿಂದ ಬ್ರಹ್ಮಕಲಶ ದಿನಾಚರಣೆ ಪ್ರಯುಕ್ತ ಗಣಯಾಗ, ಏಕದಶಾರುದ್ರಾಭಿಷೇಕ, ಪವಮಾನಹೋಮ, ಆಶ್ಲೇಷ ಬಲಿ, ಶ್ರೀ ಅನಂತೇಶ್ವರ ಸ್ವಾಮಿಗೆ ವಿಶೇಷ ಕಲಶಾಭಿಷೇಕ, ಶ್ರೀ ಗಣಪತಿ ದೇವರಿಗೆ ಕಟಾಹ ಅಪೂಪ ನೈವೇದ್ಯ ಸಮರ್ಪಣೆ ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಸಾಯಂ. ಗಂಟೆ 7ರಿಂದ ಚಂದ್ರಮಂಡಲೋತ್ಸವ ವಸಂತ ಸೇವೆ, ಮಹಾಪೂಜೆ. ಏ. 30ರಂದು ಪೂರ್ವಾಹ್ನ ಗಂಟೆ 7ರಿಂದ ದರ್ಶನ ಬಲಿ ಸಾಯಂ. ಗಂಟೆ 6ರಿಂದ ಮಹಾರಥೋತ್ಸವ, ಮಹಾಪೂಜೆ, ಶ್ರೀಭೂತ ಬಲಿ, ಮೇ 1ಪ್ರಾತಃಕಾಲ ಕವಾಟೋದ್ಘಾಟನೆ, ವಸಂತ ಸೇವೆ ಮಧ್ಯಾಹ್ನ 11ರಿಂದ ತುಲಾಭಾರ ಸೇವೆ, ಮಹಾಪೂಜೆ, ಅನ್ನಸಂತರ್ಪಣೆ, ಸಾಯಂ. ಗಂಟೆ 4ರಿಂದ ಅವಭ್ರತ ರಾತ್ರಿ 8ರಿಂದ ಧ್ವಜಾವರೋಹಣ, ಮಹಾಪೂಜೆ. ಮೇ. 2ರಂದು ಮಹಾಸಂಪ್ರೋಕ್ಷಣೆ, ತುಲಾಭಾರ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

Related posts

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!