23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

ಮಚ್ಚಿನ: ಇತಿಹಾಸ ಪ್ರಸಿದ್ಧ ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಜರಗುವ ಬ್ರಹ್ಮಕಲಶ ವಾರ್ಷಿಕ ದಿನಾಚರಣೆ ಮತ್ತು ವಾರ್ಷಿಕ ಮೇಷ ಜಾತ್ರಾ ಮಹೋತ್ಸವವು ಏ. 23ದಿಂದ ಮೇ.2ರವರೆಗೆ ಜರಗಲಿದೆ.

ಏ.23ರಂದು ಸೀಯಾಳಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ ಗಂಟೆ 6.30ರಿಂದ ಧ್ವಜಾರೋಹಣ, ಮಹಾಪೂಜೆ, ಉತ್ಸವ, ವಸಂತ ಸೇವೆ ನಡೆಯಿತು. ಏ. 24 ಮಹಾಪೂಜೆ, ಏಕಾದಶಿ, ರಾತ್ರಿ ಗಂಟೆ 7ರಿಂದ ಮಹಾಪೂಜೆ, ಉತ್ಸವ ನಡೆಯಿತು.

ಏ. 25ರಂದು ಮಧ್ಯಾಹ್ನ ಮಹಾಪೂಜೆ , ಸಾಯಂ. ಗಂಟೆ 4ರಿಂದ ಶ್ರೀ ದೇವಳದಿಂದ ಭಂಡಾರ ಹೊರಟು ಪಿಲಿಚಾಮುಂಡಿ ದೈವದ ನೇಮ, ಸಂಜೆ ಗಂಟೆ 6.30ರಿಂದ ಮಹಾಪೂಜೆ, ಉತ್ಸವ, ಏ. 26ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಸಾಯಂ. ಗಂಟೆ 6ರಿಂದ ಕೊಪ್ಪರಿಗೆ ಏರಿಸುವುದು, ಬಯ್ಯದ ಬಲಿ ಪ್ರಾರಂಭ, ವಸಂತ ಸೇವೆ, ಏ.27ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ ಗಂಟೆ 7ರಿಂದ ಕೆರೆ ಆಯನ, ಉತ್ಸವ, ಮಹಾಪೂಜೆ. ಏ.28ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಾಯಂ. ಗಂಟೆ 4ರಿಂದ ಉತ್ಸವ, ಮೂಡುಕಟ್ಟೆ ಸವಾರಿ, ವಸಂತ ಸೇವೆ, ಮಹಾಪೂಜೆ. ಏ. 29ರಂದು ಪೂರ್ವಾಹ್ನ ಗಂಟೆ 7ರಿಂದ ಬ್ರಹ್ಮಕಲಶ ದಿನಾಚರಣೆ ಪ್ರಯುಕ್ತ ಗಣಯಾಗ, ಏಕದಶಾರುದ್ರಾಭಿಷೇಕ, ಪವಮಾನಹೋಮ, ಆಶ್ಲೇಷ ಬಲಿ, ಶ್ರೀ ಅನಂತೇಶ್ವರ ಸ್ವಾಮಿಗೆ ವಿಶೇಷ ಕಲಶಾಭಿಷೇಕ, ಶ್ರೀ ಗಣಪತಿ ದೇವರಿಗೆ ಕಟಾಹ ಅಪೂಪ ನೈವೇದ್ಯ ಸಮರ್ಪಣೆ ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಸಾಯಂ. ಗಂಟೆ 7ರಿಂದ ಚಂದ್ರಮಂಡಲೋತ್ಸವ ವಸಂತ ಸೇವೆ, ಮಹಾಪೂಜೆ. ಏ. 30ರಂದು ಪೂರ್ವಾಹ್ನ ಗಂಟೆ 7ರಿಂದ ದರ್ಶನ ಬಲಿ ಸಾಯಂ. ಗಂಟೆ 6ರಿಂದ ಮಹಾರಥೋತ್ಸವ, ಮಹಾಪೂಜೆ, ಶ್ರೀಭೂತ ಬಲಿ, ಮೇ 1ಪ್ರಾತಃಕಾಲ ಕವಾಟೋದ್ಘಾಟನೆ, ವಸಂತ ಸೇವೆ ಮಧ್ಯಾಹ್ನ 11ರಿಂದ ತುಲಾಭಾರ ಸೇವೆ, ಮಹಾಪೂಜೆ, ಅನ್ನಸಂತರ್ಪಣೆ, ಸಾಯಂ. ಗಂಟೆ 4ರಿಂದ ಅವಭ್ರತ ರಾತ್ರಿ 8ರಿಂದ ಧ್ವಜಾವರೋಹಣ, ಮಹಾಪೂಜೆ. ಮೇ. 2ರಂದು ಮಹಾಸಂಪ್ರೋಕ್ಷಣೆ, ತುಲಾಭಾರ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

Related posts

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya
error: Content is protected !!