23.8 C
ಪುತ್ತೂರು, ಬೆಳ್ತಂಗಡಿ
June 12, 2025
Uncategorized

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ವತಿಯಿಂದ ಪಹಾಲ್ ಗಾಮ್ ಧಾಳಿ ಯ ಬಗ್ಗೆ ಖಂಡನಾ ಸಭೆ ಹಾಗೂ ಶ್ರದ್ಧಾಂಜಲಿ ಸಭೆ ನಡೆಯಿತು.

ಪಹಾಲ್ ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರು ಹಾಗೂ ಅಮಾಯಕರ ಮೇಲೆ ನಡೆಸಿದ ದಾಳಿ ಬಗ್ಗೆ ವಕೀಲರ ಸಂಘವು ಸಭೆಯನ್ನು ನಡಿಸಿ ಅತ್ಯುಗ್ರವಾಗಿ ಖಂಡಿಸಿದೆ. ಸಭೆಯಲ್ಲಿ ಹಿರಿಯ ವಕೀಲರಾದ ಸುಬ್ರಮಣ್ಯ ಕುಮಾರ್ ಅಗರ್ತ ಮಾತನಾಡುತ್ತ ಈ ತರಹದ ಕೃತ್ಯಗಳು ನಡೆದಾಗ ನಾವೆಲ್ಲರು ಜಾತಿ, ಧರ್ಮ, ಪಕ್ಷ ಹಾಗೂ ಮನಸ್ತಾಪಗಳನ್ನು ಮರೆತು ಒಗ್ಗಟ್ಟಾಗಿ ಖಂಡಿಸಿ ನಾವು ಸರಕಾರದ ಜೊತೆ ದೇಶದ ಜೊತೆ ನಿಲ್ಲಬೇಕು ಎಂದು ತಮ್ಮ ಮಾತಲ್ಲಿ ತಿಳಿಸಿದರು. ಹಿರಿಯ ವಕೀಲರಾದ ಶಿವಕುಮಾರ್ ಎಸ್ ಎಂ ಮಾತನಾಡುತ್ತ ಇದು ನಮ್ಮ ದೇಶದ ಮೇಲೆ ಆಗಿರುವ ದಾಳಿಯಾಗಿದೆ. ಪ್ರವಾಸೋದ್ಯಮ ಉತ್ತುಂಗಲ್ಲಿರುವಾಗ ಅದನ್ನು ಸಹಿಸದೆ ಈ ಕೃತ್ಯ ಎಸಗಲಾಗಿದೆ. ನಾವು ಎಲ್ಲರೂ ಒಂದಾಗಿ ಇದನ್ನು ಖಂಡಿಸ ಬೇಕಾಗಿದೆ ಎಂದರು.ಅಧ್ಯಕ್ಷರಾದ ವಸಂತ ಮರಕಡ ಈ ಕೃತ್ಯವನ್ನು ಖಂಡಿಸುತ್ತಾ ಈ ದಾಳಿಯು ನಮ್ಮ ದೇಶದ ಮೇಲೆ ಹೇಡಿಗಳು ಮಾಡಿರುವ ದಾಳಿಯಾಗಿದೆ, ಇದರ ಬಗ್ಗೆ ವಾಟ್ಸಪ್ಪ್, ಫೇಸ್ಬುಕ್ ಗಳಲ್ಲಿ ದಾಳಿಕೊರರರು ಮಾಡಿರುವ ಕೃತ್ಯವನ್ನು ಸಮರ್ಥಿಸುವವರನ್ನು ಸಮಾಜ ಬಹಿಷ್ಕರಿಸಬೇಕು, ಖಂಡಿಸ್ಬೇಕು ಅವರೆಲ್ಲರೂ ದೇಶದ್ರೋಹಿಗಳು ಎಂದು ಹೇಳಿದರು.

ವೇದಿಕೆಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾದ ಅಶೋಕ್ ಕರಿಯನೆಲ ಉಪಸ್ಥಿತರಿದ್ದರು. ಪ್ರಾಸ್ತಾವಿಕವಾಗಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ.ಕೆ ಮಾತನಾಡಿದರು.

ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ಹಿರಿಯ ಕಿರಿಯ ವಕೀಲರಗಳು, ಸರಕಾರಿ ವಕೀಲರುಗಳು ಹಾಜರಿದ್ದರು.

Related posts

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya
error: Content is protected !!