22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ವತಿಯಿಂದ ಪಹಾಲ್ ಗಾಮ್ ಧಾಳಿ ಯ ಬಗ್ಗೆ ಖಂಡನಾ ಸಭೆ ಹಾಗೂ ಶ್ರದ್ಧಾಂಜಲಿ ಸಭೆ ನಡೆಯಿತು.

ಪಹಾಲ್ ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರು ಹಾಗೂ ಅಮಾಯಕರ ಮೇಲೆ ನಡೆಸಿದ ದಾಳಿ ಬಗ್ಗೆ ವಕೀಲರ ಸಂಘವು ಸಭೆಯನ್ನು ನಡಿಸಿ ಅತ್ಯುಗ್ರವಾಗಿ ಖಂಡಿಸಿದೆ. ಸಭೆಯಲ್ಲಿ ಹಿರಿಯ ವಕೀಲರಾದ ಸುಬ್ರಮಣ್ಯ ಕುಮಾರ್ ಅಗರ್ತ ಮಾತನಾಡುತ್ತ ಈ ತರಹದ ಕೃತ್ಯಗಳು ನಡೆದಾಗ ನಾವೆಲ್ಲರು ಜಾತಿ, ಧರ್ಮ, ಪಕ್ಷ ಹಾಗೂ ಮನಸ್ತಾಪಗಳನ್ನು ಮರೆತು ಒಗ್ಗಟ್ಟಾಗಿ ಖಂಡಿಸಿ ನಾವು ಸರಕಾರದ ಜೊತೆ ದೇಶದ ಜೊತೆ ನಿಲ್ಲಬೇಕು ಎಂದು ತಮ್ಮ ಮಾತಲ್ಲಿ ತಿಳಿಸಿದರು. ಹಿರಿಯ ವಕೀಲರಾದ ಶಿವಕುಮಾರ್ ಎಸ್ ಎಂ ಮಾತನಾಡುತ್ತ ಇದು ನಮ್ಮ ದೇಶದ ಮೇಲೆ ಆಗಿರುವ ದಾಳಿಯಾಗಿದೆ. ಪ್ರವಾಸೋದ್ಯಮ ಉತ್ತುಂಗಲ್ಲಿರುವಾಗ ಅದನ್ನು ಸಹಿಸದೆ ಈ ಕೃತ್ಯ ಎಸಗಲಾಗಿದೆ. ನಾವು ಎಲ್ಲರೂ ಒಂದಾಗಿ ಇದನ್ನು ಖಂಡಿಸ ಬೇಕಾಗಿದೆ ಎಂದರು.ಅಧ್ಯಕ್ಷರಾದ ವಸಂತ ಮರಕಡ ಈ ಕೃತ್ಯವನ್ನು ಖಂಡಿಸುತ್ತಾ ಈ ದಾಳಿಯು ನಮ್ಮ ದೇಶದ ಮೇಲೆ ಹೇಡಿಗಳು ಮಾಡಿರುವ ದಾಳಿಯಾಗಿದೆ, ಇದರ ಬಗ್ಗೆ ವಾಟ್ಸಪ್ಪ್, ಫೇಸ್ಬುಕ್ ಗಳಲ್ಲಿ ದಾಳಿಕೊರರರು ಮಾಡಿರುವ ಕೃತ್ಯವನ್ನು ಸಮರ್ಥಿಸುವವರನ್ನು ಸಮಾಜ ಬಹಿಷ್ಕರಿಸಬೇಕು, ಖಂಡಿಸ್ಬೇಕು ಅವರೆಲ್ಲರೂ ದೇಶದ್ರೋಹಿಗಳು ಎಂದು ಹೇಳಿದರು.

ವೇದಿಕೆಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾದ ಅಶೋಕ್ ಕರಿಯನೆಲ ಉಪಸ್ಥಿತರಿದ್ದರು. ಪ್ರಾಸ್ತಾವಿಕವಾಗಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ.ಕೆ ಮಾತನಾಡಿದರು.

ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ಹಿರಿಯ ಕಿರಿಯ ವಕೀಲರಗಳು, ಸರಕಾರಿ ವಕೀಲರುಗಳು ಹಾಜರಿದ್ದರು.

Related posts

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ಹದಗೆಟ್ಟ ರಾಜ್ಯದ ಆರ್ಥಿಕತೆ ತುಂಬಲು ಕುಮ್ಕಿ ಭೂಮಿಯ ಕಬಳಿಕೆಗೆ ಸರಕಾರದ ಹುನ್ನಾರ: ಬಿಜೆಪಿ ರೈತ ಮೋರ್ಚಾ ಆಕ್ರೋಶ

Suddi Udaya
error: Content is protected !!