41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

ಕಾಶಿಪಟ್ಣ: ತಂಡವೊಂದು ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಎ.24ರಂದು ರಾತ್ರಿ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಎಂಬಲ್ಲಿ ಸಂಭವಿಸಿದೆ.


ಎ. 24 ರಂದು ರಾತ್ರಿ 10ಕ್ಕೆ ಕಾಶಿಪಟ್ಣ ಗ್ರಾಮದ ಮಿತ್ತೋಟ್ಟುಯ ಧರ್ಣಪ್ಪ ಪೂಜಾರಿ ಎಂಬವರ ಮನೆಯ ಬಳಿ ಬಂದು ಅವರ ಪುತ್ರ ಅಭಿಷೇಕ್‌ನನ್ನು ಮೊಬೈಲ್ ಕರೆ ಮಾಡಿ ಮನೆಯ ಬಳಿ ರಸ್ತೆಗೆ ಕರೆದು ಇನ್ ವರ್ಟರ್ ತೆಗೆದುಕೊಂಡು ಬಾ ಎಂದು ಅವಾಚ್ಯ ಶಬ್ದಗಳಿಂದ ಬೈದಾಗ ಇವರೊಳಗೆ ಮಾತಿನ ಚಕಮಕಿ ನಡೆದಿದ್ದು, ಆ ಸಮಯ ಧರ್ಣಪ್ಪ ಪೂಜಾರಿಯವರು ಅಭಿಷೇಕ್‌ನನ್ನು ಮನೆಗೆ ಕರೆದುಕೊಂಡು ಬರುವ ಸಮಯ ಅವರ ಮನೆಯಂಗಳಕ್ಕೆ ಅಕ್ರಮ ಪ್ರವೇಶಮಾಡಿ, ಜಗ್ಗು @ ಜಗದೀಶ್ ಎಂಬಾತ ಧರ್ಣಪ್ಪ ಪೂಜಾರಿಯವರಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಅವರ ಪುತ್ರ ಅಭಿಷೇಕ್‌ಗೆ ಸುಜಿತ್, ಆಕಾಶ್, ಸವಿನ್, ಸಂಜಯ್‌ಸೇರಿ ಕೈಯಿಂದ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಆ ಸಮಯ ಮನೆಯಲಿದ್ದ ಧರ್ಣಪ್ಪ ಪೂಜಾರಿಯವರ ದೊಡ್ಡ ಮಗ ಅನಿಲ್, ಮಗಳು ಆಶಾ, ಮತ್ತು ಪತ್ನಿ ಬೇಬಿರವರಿಗೂ ಅವರು ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿ ಒಡ್ಡಿರುವುದಾಗಿ ಧರ್ಣಪ್ಪ ಪೂಜಾರಿಯವರು ವೇಣೂರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya
error: Content is protected !!