July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

ಕಾಶಿಪಟ್ಣ: ತಂಡವೊಂದು ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಎ.24ರಂದು ರಾತ್ರಿ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಎಂಬಲ್ಲಿ ಸಂಭವಿಸಿದೆ.


ಎ. 24 ರಂದು ರಾತ್ರಿ 10ಕ್ಕೆ ಕಾಶಿಪಟ್ಣ ಗ್ರಾಮದ ಮಿತ್ತೋಟ್ಟುಯ ಧರ್ಣಪ್ಪ ಪೂಜಾರಿ ಎಂಬವರ ಮನೆಯ ಬಳಿ ಬಂದು ಅವರ ಪುತ್ರ ಅಭಿಷೇಕ್‌ನನ್ನು ಮೊಬೈಲ್ ಕರೆ ಮಾಡಿ ಮನೆಯ ಬಳಿ ರಸ್ತೆಗೆ ಕರೆದು ಇನ್ ವರ್ಟರ್ ತೆಗೆದುಕೊಂಡು ಬಾ ಎಂದು ಅವಾಚ್ಯ ಶಬ್ದಗಳಿಂದ ಬೈದಾಗ ಇವರೊಳಗೆ ಮಾತಿನ ಚಕಮಕಿ ನಡೆದಿದ್ದು, ಆ ಸಮಯ ಧರ್ಣಪ್ಪ ಪೂಜಾರಿಯವರು ಅಭಿಷೇಕ್‌ನನ್ನು ಮನೆಗೆ ಕರೆದುಕೊಂಡು ಬರುವ ಸಮಯ ಅವರ ಮನೆಯಂಗಳಕ್ಕೆ ಅಕ್ರಮ ಪ್ರವೇಶಮಾಡಿ, ಜಗ್ಗು @ ಜಗದೀಶ್ ಎಂಬಾತ ಧರ್ಣಪ್ಪ ಪೂಜಾರಿಯವರಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಅವರ ಪುತ್ರ ಅಭಿಷೇಕ್‌ಗೆ ಸುಜಿತ್, ಆಕಾಶ್, ಸವಿನ್, ಸಂಜಯ್‌ಸೇರಿ ಕೈಯಿಂದ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಆ ಸಮಯ ಮನೆಯಲಿದ್ದ ಧರ್ಣಪ್ಪ ಪೂಜಾರಿಯವರ ದೊಡ್ಡ ಮಗ ಅನಿಲ್, ಮಗಳು ಆಶಾ, ಮತ್ತು ಪತ್ನಿ ಬೇಬಿರವರಿಗೂ ಅವರು ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿ ಒಡ್ಡಿರುವುದಾಗಿ ಧರ್ಣಪ್ಪ ಪೂಜಾರಿಯವರು ವೇಣೂರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya
error: Content is protected !!