41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

ಕೊಯ್ಯೂರು : ಜ.25 ರಂದು ಜರುಗಿದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸಹಕಾರ ಭಾರತಿ 7 ಸ್ಥಾನವನ್ನು ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರು 5 ಸ್ಥಾನಗಳನ್ನು ಪಡೆದು ವಿಜಯಿಗಳಾಗಿದ್ದು, ನ್ಯಾಯಾಲಯದ ಆದೇಶ ಬರುವವರೆಗೆ ಘೋಷಣೆಯನ್ನು ತಡೆಹಿಡಿಯಲಾಗಿತ್ತು.

ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥಗೊಂಡಿರುವುದರಿಂದ ಚುನಾವಣಾ ಅಧಿಕಾರಿಯ ಆದೇಶದಂತೆ ಇಂದು(ಎ. 25,) ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಲ್ಲಿ ಅಧ್ಯಕ್ಷರಾಗಿ ರವೀಂದ್ರನಾಥ್ ಪಿ ಪೆರ್ಮುದೆ , ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ನಿರ್ದೇಶಕರುಗಳಾಗಿ ಅಶೋಕ್ ಕುಮಾರ್, ಉಜ್ವಲ್ ಕುಮಾರ್ ಕೆಆರ್ , ದಾಮೋದರ ಗೌಡ ,ನವೀನ್ ಕುಮಾರ್ ,ಪರಮೇಶ್ವರ ಗೌಡ, ಯತೀಶ, ಕುಸುಮಾವತಿ, ಶೋಭಾ ,ಕೇಶವ ಪೂಜಾರಿ, ಸಂಜೀವ ಮಲೆಕುಡಿಯ ಆಯ್ಕೆಯಾಗಿರುತ್ತಾರೆ.

ಚುನಾವಣಾ ಅಧಿಕಾರಿಯಾಗಿ ಶ್ರೀಮತಿ ಪ್ರತಿಮಾ ಬಿ ವಿ ಚುನಾವಣೆಯ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ವಲಯ ಮೇಲ್ವಿಚಾರಕ ಸುದರ್ಶನ್ ದ.ಕ ಜಿ ಕೇಂದ್ರ ಬ್ಯಾಂಕಿನ ಪ್ರತಿನಿಧಿ ಹಾಜರಿದ್ದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಅನಂತಕೃಷ್ಣ ಭಟ್ ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya
error: Content is protected !!