July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

ತೆಕ್ಕಾರು ಭಟ್ರಬೈಲು ದೇವರಗುಡ್ಡ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ದೇವರ ಆಭರಣ, ಉತ್ಸವ ಮೂರ್ತಿಯನ್ನು ಬಿ.ಸಿ.ರೋಡಿನ ಶ್ರೀ ರಕೇಶ್ವರೀ ದೇವಿ ಸನ್ನಿಧಿಯ ಬಳಿಯಿಂದ ತೆಕ್ಕಾರು ದೇವಸ್ಥಾನಕ್ಕೆ ಸಾಗಿಸಲಾಯಿತು. ಶ್ರೀ ರಕೇಶ್ವರೀ ಸನ್ನಿಧಿಯ ಅರ್ಚಕ ರಘುಪತಿ ಭಟ್ ಅವರು ಪ್ರಾರ್ಥನೆ ಸಲ್ಲಿಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಶ್ರೀ ರಕೇಶ್ವರೀ ಸನ್ನಿಧಿ ಸೇವಾ ಸಮಿತಿ ಅಧ್ಯಕ್ಷ ವಿಶ್ವನಾಥ್ ಬಿ, ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ಸಂಪತ್‌ಕುಮಾ‌ರ್ ಶೆಟ್ಟಿ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಜಯಂತಿ ಪೂಜಾರಿ, ವೆಂಕಪ್ಪ ಪೂಜಾರಿ, ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸೇವಾ ಟ್ರಸ್ಟ್ ಸಂಚಾಲಕ ಲಕ್ಷಣ್ ಭಟ್ರಬೈಲು, ಕಾರ್ಯದರ್ಶಿ ಮಂಜುನಾಥ ಸಾಲ್ಯಾನ್ ಬಡೆಗ್ರಾಮ, ಕೋಶಾಧಿಕಾರಿ ಸುರೇಶ್ ಪಿ.ಪುಳಿತ್ತಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತುಕರಾಮ್ ನಾಯಕ್ ಬಿ, ಉಪಾಧ್ಯಕ್ಷ ತುಳಸೀಧರ ಬೇನೆಪ್ಪು, ಸದಸ್ಯ ಶರತ್ ಆನಲೆ ಉಪಸ್ಥಿತರಿದ್ದರು.

ವಿವಿಧ ವಾಹನಗಳ ಮೂಲಕ ನೂರಾರು ಭಕ್ತರು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya
error: Content is protected !!