25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕಾಗಿ ಸಂಪೂರ್ಣ ರೀತಿಯಲ್ಲಿ ಸಹಕಾರವನ್ನು ನೀಡುತ್ತಿರುವ ಬೆಳ್ತಂಗಡಿಯ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಲ್ಯಾನ್ಸಿ ಎ ಪಿರೇರಾ ಹಾಗೂ ಸಂಸ್ಥೆಯ ಮುಖ್ಯ ಪ್ರಬಂಧಕರಾದ ಶ್ರೀಮತಿ ಐರಿನ್ ಡಿಸೋಜ ಹಾಗೂ ಸಿಬ್ಬಂದಿಗಳನ್ನು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಕೇಂದ್ರ ಕಚೇರಿಯ ಪರವಾಗಿ ಬೆಳ್ತಂಗಡಿ ಶಾಖಾ ಕಛೇರಿ ವತಿಯಿಂದ ಬ್ಯಾಂಕಿನ ನಿರ್ದೇಶಕರಾದ ಧರಣೇಂದ್ರ ಕೆ ರವರು ಗೌರವಿಸಿದರು.

ಗೌರವವನ್ನು ಸ್ವೀಕರಿಸಿದ ಲ್ಯಾನ್ಸಿ ಪಿರೇರರವರು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಸಿಬ್ಬಂದಿಗಳ ಕಾರ್ಯ ಮೆಚ್ಚುವ ರೀತಿಯಲ್ಲಿ ಇರುವ ಕಾರಣ ನಮ್ಮ ಸಂಸ್ಥೆಯು ಕೂಡ ತಮ್ಮ ಬ್ಯಾಂಕಿನೊಂದಿಗೆ ಸದಾ ಸಹಕಾರಕ್ಕೆ ಬದ್ಧವಾಗಿದೆ. ತಮ್ಮ ಈ ಸೇವೆಯು ಮುಂದೆಯು ಕೂಡ ಇದೇ ರೀತಿ ಮುಂದುವರೆಯಲಿ, ಅದೇ ರೀತಿಯಲ್ಲಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ನಮ್ಮ ಸಹೋದರ ಧರಣೇಂದ್ರ ರವರು ಕೂಡ ಉತ್ತಮ ಸೇವೆಯನ್ನು ಮಾಡುವಂತಾಗಲಿ ಎಂದು ಮನದಾಳದ ಮಾತುಗಳನ್ನು ಹಂಚಿಕೊಂಡರು.


ಈ ಸಂದರ್ಭದಲ್ಲಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯಯ ಶಾಖಾ ಪ್ರಬಂಧಕರಾದ ಚೇತನ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಗಣೇಶ್ ಮತ್ತು ಅನಿಲ್ ಕುಮಾರ್ ಕೆ ಜಿ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!