April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

ಕಾಶಿಪಟ್ಣ: ತಂಡವೊಂದು ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಎ.24ರಂದು ರಾತ್ರಿ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಎಂಬಲ್ಲಿ ಸಂಭವಿಸಿದೆ.


ಎ. 24 ರಂದು ರಾತ್ರಿ 10ಕ್ಕೆ ಕಾಶಿಪಟ್ಣ ಗ್ರಾಮದ ಮಿತ್ತೋಟ್ಟುಯ ಧರ್ಣಪ್ಪ ಪೂಜಾರಿ ಎಂಬವರ ಮನೆಯ ಬಳಿ ಬಂದು ಅವರ ಪುತ್ರ ಅಭಿಷೇಕ್‌ನನ್ನು ಮೊಬೈಲ್ ಕರೆ ಮಾಡಿ ಮನೆಯ ಬಳಿ ರಸ್ತೆಗೆ ಕರೆದು ಇನ್ ವರ್ಟರ್ ತೆಗೆದುಕೊಂಡು ಬಾ ಎಂದು ಅವಾಚ್ಯ ಶಬ್ದಗಳಿಂದ ಬೈದಾಗ ಇವರೊಳಗೆ ಮಾತಿನ ಚಕಮಕಿ ನಡೆದಿದ್ದು, ಆ ಸಮಯ ಧರ್ಣಪ್ಪ ಪೂಜಾರಿಯವರು ಅಭಿಷೇಕ್‌ನನ್ನು ಮನೆಗೆ ಕರೆದುಕೊಂಡು ಬರುವ ಸಮಯ ಅವರ ಮನೆಯಂಗಳಕ್ಕೆ ಅಕ್ರಮ ಪ್ರವೇಶಮಾಡಿ, ಜಗ್ಗು @ ಜಗದೀಶ್ ಎಂಬಾತ ಧರ್ಣಪ್ಪ ಪೂಜಾರಿಯವರಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಅವರ ಪುತ್ರ ಅಭಿಷೇಕ್‌ಗೆ ಸುಜಿತ್, ಆಕಾಶ್, ಸವಿನ್, ಸಂಜಯ್‌ಸೇರಿ ಕೈಯಿಂದ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಆ ಸಮಯ ಮನೆಯಲಿದ್ದ ಧರ್ಣಪ್ಪ ಪೂಜಾರಿಯವರ ದೊಡ್ಡ ಮಗ ಅನಿಲ್, ಮಗಳು ಆಶಾ, ಮತ್ತು ಪತ್ನಿ ಬೇಬಿರವರಿಗೂ ಅವರು ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿ ಒಡ್ಡಿರುವುದಾಗಿ ಧರ್ಣಪ್ಪ ಪೂಜಾರಿಯವರು ವೇಣೂರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya
error: Content is protected !!