22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

ಕಾಶಿಪಟ್ಣ: ತಂಡವೊಂದು ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಎ.24ರಂದು ರಾತ್ರಿ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಎಂಬಲ್ಲಿ ಸಂಭವಿಸಿದೆ.


ಎ. 24 ರಂದು ರಾತ್ರಿ 10ಕ್ಕೆ ಕಾಶಿಪಟ್ಣ ಗ್ರಾಮದ ಮಿತ್ತೋಟ್ಟುಯ ಧರ್ಣಪ್ಪ ಪೂಜಾರಿ ಎಂಬವರ ಮನೆಯ ಬಳಿ ಬಂದು ಅವರ ಪುತ್ರ ಅಭಿಷೇಕ್‌ನನ್ನು ಮೊಬೈಲ್ ಕರೆ ಮಾಡಿ ಮನೆಯ ಬಳಿ ರಸ್ತೆಗೆ ಕರೆದು ಇನ್ ವರ್ಟರ್ ತೆಗೆದುಕೊಂಡು ಬಾ ಎಂದು ಅವಾಚ್ಯ ಶಬ್ದಗಳಿಂದ ಬೈದಾಗ ಇವರೊಳಗೆ ಮಾತಿನ ಚಕಮಕಿ ನಡೆದಿದ್ದು, ಆ ಸಮಯ ಧರ್ಣಪ್ಪ ಪೂಜಾರಿಯವರು ಅಭಿಷೇಕ್‌ನನ್ನು ಮನೆಗೆ ಕರೆದುಕೊಂಡು ಬರುವ ಸಮಯ ಅವರ ಮನೆಯಂಗಳಕ್ಕೆ ಅಕ್ರಮ ಪ್ರವೇಶಮಾಡಿ, ಜಗ್ಗು @ ಜಗದೀಶ್ ಎಂಬಾತ ಧರ್ಣಪ್ಪ ಪೂಜಾರಿಯವರಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಅವರ ಪುತ್ರ ಅಭಿಷೇಕ್‌ಗೆ ಸುಜಿತ್, ಆಕಾಶ್, ಸವಿನ್, ಸಂಜಯ್‌ಸೇರಿ ಕೈಯಿಂದ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಆ ಸಮಯ ಮನೆಯಲಿದ್ದ ಧರ್ಣಪ್ಪ ಪೂಜಾರಿಯವರ ದೊಡ್ಡ ಮಗ ಅನಿಲ್, ಮಗಳು ಆಶಾ, ಮತ್ತು ಪತ್ನಿ ಬೇಬಿರವರಿಗೂ ಅವರು ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿ ಒಡ್ಡಿರುವುದಾಗಿ ಧರ್ಣಪ್ಪ ಪೂಜಾರಿಯವರು ವೇಣೂರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!