September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

ಕಾಶಿಪಟ್ಣ: ತಂಡವೊಂದು ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಎ.24ರಂದು ರಾತ್ರಿ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಎಂಬಲ್ಲಿ ಸಂಭವಿಸಿದೆ.


ಎ. 24 ರಂದು ರಾತ್ರಿ 10ಕ್ಕೆ ಕಾಶಿಪಟ್ಣ ಗ್ರಾಮದ ಮಿತ್ತೋಟ್ಟುಯ ಧರ್ಣಪ್ಪ ಪೂಜಾರಿ ಎಂಬವರ ಮನೆಯ ಬಳಿ ಬಂದು ಅವರ ಪುತ್ರ ಅಭಿಷೇಕ್‌ನನ್ನು ಮೊಬೈಲ್ ಕರೆ ಮಾಡಿ ಮನೆಯ ಬಳಿ ರಸ್ತೆಗೆ ಕರೆದು ಇನ್ ವರ್ಟರ್ ತೆಗೆದುಕೊಂಡು ಬಾ ಎಂದು ಅವಾಚ್ಯ ಶಬ್ದಗಳಿಂದ ಬೈದಾಗ ಇವರೊಳಗೆ ಮಾತಿನ ಚಕಮಕಿ ನಡೆದಿದ್ದು, ಆ ಸಮಯ ಧರ್ಣಪ್ಪ ಪೂಜಾರಿಯವರು ಅಭಿಷೇಕ್‌ನನ್ನು ಮನೆಗೆ ಕರೆದುಕೊಂಡು ಬರುವ ಸಮಯ ಅವರ ಮನೆಯಂಗಳಕ್ಕೆ ಅಕ್ರಮ ಪ್ರವೇಶಮಾಡಿ, ಜಗ್ಗು @ ಜಗದೀಶ್ ಎಂಬಾತ ಧರ್ಣಪ್ಪ ಪೂಜಾರಿಯವರಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಅವರ ಪುತ್ರ ಅಭಿಷೇಕ್‌ಗೆ ಸುಜಿತ್, ಆಕಾಶ್, ಸವಿನ್, ಸಂಜಯ್‌ಸೇರಿ ಕೈಯಿಂದ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಆ ಸಮಯ ಮನೆಯಲಿದ್ದ ಧರ್ಣಪ್ಪ ಪೂಜಾರಿಯವರ ದೊಡ್ಡ ಮಗ ಅನಿಲ್, ಮಗಳು ಆಶಾ, ಮತ್ತು ಪತ್ನಿ ಬೇಬಿರವರಿಗೂ ಅವರು ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿ ಒಡ್ಡಿರುವುದಾಗಿ ಧರ್ಣಪ್ಪ ಪೂಜಾರಿಯವರು ವೇಣೂರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya
error: Content is protected !!