25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇನ್ವರ್ಟರ್ ನೀಡುವಂತೆ ಮನೆಗೆ ಕೇಳಲು ಹೋಗಿದ್ದವರಿಗೆ ಕತ್ತಿಯಿಂದ ಹಲ್ಲೆ

ಕಾಶಿಪಟ್ಣ: ಇನ್ವರ್ಟರ್ ನೀಡುವಂತೆ ಮನೆ ಬಳಿಗೆ ಹೋಗಿದ್ದವರಿಗೆ ಕತ್ತಿಯಿಂದ ಕಡಿದು, ಟಾರ್ಚ್ ಲೈಟ್‌ನಿಂದ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿದ ಘಟನೆ ಎ.24 ರಂದು ರಾತ್ರಿ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಎಂಬಲ್ಲಿ ಸಂಭವಿಸಿದೆ.

ಮರೋಡಿ ಗ್ರಾಮದ ಪೆಂಚಾರ್ ಪಿಜತಕಟ್ಟೆ ನಿವಾಸಿ ಸುಜಿತ್ ಎಂಬವರೊಂದಿಗೆ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಅಭಿಷೇಕ್ ಕೆಲಸ ಮಾಡಿಕೊಂಡಿದ್ದು, ಅಭಿಷೇಕ್‌ನ ಮನೆಯಲ್ಲಿ ಇಟ್ಟಿದ್ದ ಇನವರ್ಟರ್‌ನ್ನು ವಾಪಾಸು ಅಂಗಡಿಗೆ ತಂದುಕೊಡುವಂತೆ ಸುಜಿತ್ ಕೇಳಿದಾಗ ಬೇಕಾದಲ್ಲಿ ಮನೆಗೆ ಬಂದು ತೆಗೆದುಕೊಂಡು ಹೋಗುವಂತೆ ಅಭಿಷೇಕ್ ತಿಳಿಸಿದ್ದನೆನ್ನಲಾಗಿದೆ.


ಅದರಂತೆ ಎ.24 ರಂದು ರಾತ್ರಿ 10 ಗಂಟೆಗೆ ಸುಜಿತ್ ತನ್ನ ಸ್ನೇಹಿತರಾದ ಆಕಾಶ್, ಜಗದೀಶ @ ಜಗ್ಗು, ಸಂಜಯ್ ಮತ್ತು ಸವಿನ್ ಎಂಬವರೊಂದಿಗೆ ಕಾಶಿಪಟ್ಣ ಮಿತ್ತೊಟ್ಟು ಅಭಿಷೇಕ್‌ನ ಮನೆಯ ಬಳಿಗೆ ಬಂದು ಇನ್ ವರ್ಟರ್ ಕೇಳಿದಾಗ, ಅಭಿಷೇಕ್ ಇನವರ್ಟರ್ ಕೊಡುವುದಿಲ್ಲ, ನೀನು ಏನು ಮಾಡುತ್ತೀಯಾ ಎಂದು ಅವ್ಯಾಚ್ಯ ಶಬ್ದಗಳಿಂದ ಬೈದಾಗ, ಅವರೊಳಗೆ ಮಾತಿನ ಚಕಮಕಿ ನಡೆದು ಅಲ್ಲಿಗೆ ಬಂದ ಅಭಿಷೇಕ್‌ನ ತಂದೆ ಧರ್ಣಪ್ಪ ಪೂಜಾರಿ ಎಂಬವರು ಜಗ್ಗು @ ಜಗದೀಶನಿಗೆ ಟಾರ್ಚ್ ಲೈಟ್ ಹಲ್ಲೆ ನಡೆಸಿ, ಅಭಿಷೇಕನನ್ನು ಮನೆಗೆ ಕರೆದುಕೊಂಡು ಹೋಗಿದ್ದು, ಆ ಸಮಯ ಮನೆಯ ಗೇಟಿನ ಬಳಿ ಸುಜಿತ್, ಅಭಿಷೇಕ್ ನಲ್ಲಿ ಇನ್ ವರ್ಟರ್ ಕೊಡು ಎಂದಾಗ ಅಭಿಷೇಕನು ಕತ್ತಿಯಿಂದ ಸುಜಿತ್ ಹಾಗೂ ಆಕಾಶ್‌ಗೆ ಕಡಿದು, ಧರ್ಣಪ್ಪ ಪೂಜಾರಿ ಟಾರ್ಚ್ ಲೈಟ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya
error: Content is protected !!