25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

ಕೊಯ್ಯೂರು : ಜ.25 ರಂದು ಜರುಗಿದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸಹಕಾರ ಭಾರತಿ 7 ಸ್ಥಾನವನ್ನು ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರು 5 ಸ್ಥಾನಗಳನ್ನು ಪಡೆದು ವಿಜಯಿಗಳಾಗಿದ್ದು, ನ್ಯಾಯಾಲಯದ ಆದೇಶ ಬರುವವರೆಗೆ ಘೋಷಣೆಯನ್ನು ತಡೆಹಿಡಿಯಲಾಗಿತ್ತು.

ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥಗೊಂಡಿರುವುದರಿಂದ ಚುನಾವಣಾ ಅಧಿಕಾರಿಯ ಆದೇಶದಂತೆ ಇಂದು(ಎ. 25,) ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಲ್ಲಿ ಅಧ್ಯಕ್ಷರಾಗಿ ರವೀಂದ್ರನಾಥ್ ಪಿ ಪೆರ್ಮುದೆ , ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ನಿರ್ದೇಶಕರುಗಳಾಗಿ ಅಶೋಕ್ ಕುಮಾರ್, ಉಜ್ವಲ್ ಕುಮಾರ್ ಕೆಆರ್ , ದಾಮೋದರ ಗೌಡ ,ನವೀನ್ ಕುಮಾರ್ ,ಪರಮೇಶ್ವರ ಗೌಡ, ಯತೀಶ, ಕುಸುಮಾವತಿ, ಶೋಭಾ ,ಕೇಶವ ಪೂಜಾರಿ, ಸಂಜೀವ ಮಲೆಕುಡಿಯ ಆಯ್ಕೆಯಾಗಿರುತ್ತಾರೆ.

ಚುನಾವಣಾ ಅಧಿಕಾರಿಯಾಗಿ ಶ್ರೀಮತಿ ಪ್ರತಿಮಾ ಬಿ ವಿ ಚುನಾವಣೆಯ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ವಲಯ ಮೇಲ್ವಿಚಾರಕ ಸುದರ್ಶನ್ ದ.ಕ ಜಿ ಕೇಂದ್ರ ಬ್ಯಾಂಕಿನ ಪ್ರತಿನಿಧಿ ಹಾಜರಿದ್ದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಅನಂತಕೃಷ್ಣ ಭಟ್ ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya
error: Content is protected !!