25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

ಬೆಳ್ತಂಗಡಿ:ಬಲಿಷ್ಠ ಭಾರತದ ರಕ್ಷಣಪಡೆಗೆ ಸವಲಾಗಿ ನಿಂತಿರುವ ಪಹಲ್ಗಾ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ. 28 ಅಮಾಯಕರನ್ನು ಗುಂಡಿಕ್ಕಿ ಕೊಂದು ಕ್ರೌರ್ಯ ಮೆರೆದ ಉಗ್ರಗಾಮಿಗಳಿಗೆ ಮತ್ತು ಅದರ ಹಿಂದಿರುವ ಶಕ್ತಿಗಳಿಗೆ ಶಾಪ ಮತ್ತು ಖಂಡನೆ ಇರಲಿ ಎಂದು ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ ತಿಳಿಸಿದ್ದಾರೆ.


ಇಂತಹ ಘಟನೆಗಳು ಚುನಾವಣಾ ಪೂರ್ವದಲ್ಲಿ ಘಟಿಸಲು ಕಾರಣವೇನು ಕೆಲವೇ ಜನ ಉಗ್ರರು ರಾಷ್ಟ್ರದ ಸುಂದರ ತಾಣಗಳಿಗೆ ದೇಶ ವಿದೇಶಗಳಿಂದ ಬರುವ ಯಾತ್ರಿಗಳನ್ನು ಗುರಿಯಾಗಿಸಿ ಹತ್ಯೆ ಮಾಡುವುದು ನಾಚಿಕೆಗೇಡಿನ ವಿಷಯ. ಪಹಲ್ ಗಾಮ್ ಅನ್ನುವ ಅತ್ಯಂತ ಸುಂದರವಾದ ಸೂಕ್ಷ್ಮ ಪ್ರದೇಶಕ್ಕೆ ದಿನನಿತ್ಯ ಸಾವಿರಾರು ಯಾತ್ರಿಗಳು ಬರುತ್ತಿದ್ದರೂ, ಯಾವುದೇ ರಕ್ಷಣೆ ಇಲ್ಲ ಅನ್ನುವುದು ನಾಚಿಕೆಗೇಡಿನ ಪ್ರಸಂಗ. ಅತ್ಯಂತ ಸೂಕ್ಷ್ಮ ಪ್ರದೇಶವಾದ ಕಾಶ್ಮೀರದಲ್ಲಿ ಇರುವ ಲಕ್ಷಾಂತರ ರಕ್ಷಣಾ ಪಡೆ ಗುಪ್ತಚರಪಡೆಗಳು ಎಲ್ಲಿ ಹೋಗಿತ್ತು , ಕೇಂದ್ರಾಡಳಿತದ ಉಸ್ತುವಾರಿ ವಹಿಸಿದ್ದ ಗವರ್ನರ್ ರವರು ಏನು ಮಾಡುತ್ತಿದ್ದರು ಅನ್ನುವ ಪ್ರಶ್ನೆ ಎದ್ದಿದೆ. ದೇಶಕ್ಕೆ ಚುನಾವಣೆಗಿಂತ ಮುಖ್ಯ ಪ್ರಜೆಗಳ ಪ್ರಾಣ ರಕ್ಷಣೆ ಅನ್ನುವುದನ್ನು ಈಗಲಾದರೂ ಅಧಿಕಾರದಲ್ಲಿರುವ ಎಲ್ಲರೂ ಗಮನಹರಿಸಬೇಕು. ಹಿಂದೂ ಮುಸ್ಲಿಂ ಅಂತ ಬೊಬ್ಬೆ ಹೊಡೆಯುವ ಮೀಡಿಯಾಗಳು ಸತ್ತ 28 ಜನರ ಪೈಕಿ 15 ಜನರು ಮುಸ್ಲಿಂ ಬಂಧುಗಳು ಅನ್ನೋದನ್ನು ನೆನಪಿಡಬೇಕು. ಎಷ್ಟೋ ಜನರ ಬಲಿದಾನವಾದ ಮೇಲೆ, ದೇಶಕ್ಕೆ ಆತ್ಮಗಾಥ ನೀಡಿದವರನ್ನು ಸುಮ್ಮನೆ ಬಿಡುವುದಿಲ್ಲ ಉಗ್ರರನ್ನು ಸಭೆ ಬಡಿಯುವೆವು ಅನ್ನುವ ವೀರಾ ವೇಷದ ಅಗತ್ಯ ಇದೆಯೇ, prevention is better than cure ಏನಾದರೂ ಕಠಿಣ ಕ್ರಮ ತೆಗೆದುಕೊಳ್ಳುವುದಿದ್ದರೆ ಮಾಡಿ ತೋರಿಸಿ. ಪ್ರತೀ ದಾಳಿಗಳ ಹಿಂದೆ ಅನುಮಾನದ ಹುತ್ತ ಖಂಡಿತ ಇದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya
error: Content is protected !!