23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕಾಗಿ ಸಂಪೂರ್ಣ ರೀತಿಯಲ್ಲಿ ಸಹಕಾರವನ್ನು ನೀಡುತ್ತಿರುವ ಬೆಳ್ತಂಗಡಿಯ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಲ್ಯಾನ್ಸಿ ಎ ಪಿರೇರಾ ಹಾಗೂ ಸಂಸ್ಥೆಯ ಮುಖ್ಯ ಪ್ರಬಂಧಕರಾದ ಶ್ರೀಮತಿ ಐರಿನ್ ಡಿಸೋಜ ಹಾಗೂ ಸಿಬ್ಬಂದಿಗಳನ್ನು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಕೇಂದ್ರ ಕಚೇರಿಯ ಪರವಾಗಿ ಬೆಳ್ತಂಗಡಿ ಶಾಖಾ ಕಛೇರಿ ವತಿಯಿಂದ ಬ್ಯಾಂಕಿನ ನಿರ್ದೇಶಕರಾದ ಧರಣೇಂದ್ರ ಕೆ ರವರು ಗೌರವಿಸಿದರು.

ಗೌರವವನ್ನು ಸ್ವೀಕರಿಸಿದ ಲ್ಯಾನ್ಸಿ ಪಿರೇರರವರು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಸಿಬ್ಬಂದಿಗಳ ಕಾರ್ಯ ಮೆಚ್ಚುವ ರೀತಿಯಲ್ಲಿ ಇರುವ ಕಾರಣ ನಮ್ಮ ಸಂಸ್ಥೆಯು ಕೂಡ ತಮ್ಮ ಬ್ಯಾಂಕಿನೊಂದಿಗೆ ಸದಾ ಸಹಕಾರಕ್ಕೆ ಬದ್ಧವಾಗಿದೆ. ತಮ್ಮ ಈ ಸೇವೆಯು ಮುಂದೆಯು ಕೂಡ ಇದೇ ರೀತಿ ಮುಂದುವರೆಯಲಿ, ಅದೇ ರೀತಿಯಲ್ಲಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ನಮ್ಮ ಸಹೋದರ ಧರಣೇಂದ್ರ ರವರು ಕೂಡ ಉತ್ತಮ ಸೇವೆಯನ್ನು ಮಾಡುವಂತಾಗಲಿ ಎಂದು ಮನದಾಳದ ಮಾತುಗಳನ್ನು ಹಂಚಿಕೊಂಡರು.


ಈ ಸಂದರ್ಭದಲ್ಲಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯಯ ಶಾಖಾ ಪ್ರಬಂಧಕರಾದ ಚೇತನ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಗಣೇಶ್ ಮತ್ತು ಅನಿಲ್ ಕುಮಾರ್ ಕೆ ಜಿ ಉಪಸ್ಥಿತರಿದ್ದರು.

Related posts

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya
error: Content is protected !!