22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕಾಗಿ ಸಂಪೂರ್ಣ ರೀತಿಯಲ್ಲಿ ಸಹಕಾರವನ್ನು ನೀಡುತ್ತಿರುವ ಬೆಳ್ತಂಗಡಿಯ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಲ್ಯಾನ್ಸಿ ಎ ಪಿರೇರಾ ಹಾಗೂ ಸಂಸ್ಥೆಯ ಮುಖ್ಯ ಪ್ರಬಂಧಕರಾದ ಶ್ರೀಮತಿ ಐರಿನ್ ಡಿಸೋಜ ಹಾಗೂ ಸಿಬ್ಬಂದಿಗಳನ್ನು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಕೇಂದ್ರ ಕಚೇರಿಯ ಪರವಾಗಿ ಬೆಳ್ತಂಗಡಿ ಶಾಖಾ ಕಛೇರಿ ವತಿಯಿಂದ ಬ್ಯಾಂಕಿನ ನಿರ್ದೇಶಕರಾದ ಧರಣೇಂದ್ರ ಕೆ ರವರು ಗೌರವಿಸಿದರು.

ಗೌರವವನ್ನು ಸ್ವೀಕರಿಸಿದ ಲ್ಯಾನ್ಸಿ ಪಿರೇರರವರು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಸಿಬ್ಬಂದಿಗಳ ಕಾರ್ಯ ಮೆಚ್ಚುವ ರೀತಿಯಲ್ಲಿ ಇರುವ ಕಾರಣ ನಮ್ಮ ಸಂಸ್ಥೆಯು ಕೂಡ ತಮ್ಮ ಬ್ಯಾಂಕಿನೊಂದಿಗೆ ಸದಾ ಸಹಕಾರಕ್ಕೆ ಬದ್ಧವಾಗಿದೆ. ತಮ್ಮ ಈ ಸೇವೆಯು ಮುಂದೆಯು ಕೂಡ ಇದೇ ರೀತಿ ಮುಂದುವರೆಯಲಿ, ಅದೇ ರೀತಿಯಲ್ಲಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ನಮ್ಮ ಸಹೋದರ ಧರಣೇಂದ್ರ ರವರು ಕೂಡ ಉತ್ತಮ ಸೇವೆಯನ್ನು ಮಾಡುವಂತಾಗಲಿ ಎಂದು ಮನದಾಳದ ಮಾತುಗಳನ್ನು ಹಂಚಿಕೊಂಡರು.


ಈ ಸಂದರ್ಭದಲ್ಲಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯಯ ಶಾಖಾ ಪ್ರಬಂಧಕರಾದ ಚೇತನ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಗಣೇಶ್ ಮತ್ತು ಅನಿಲ್ ಕುಮಾರ್ ಕೆ ಜಿ ಉಪಸ್ಥಿತರಿದ್ದರು.

Related posts

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya
error: Content is protected !!