30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

ಕಾಶಿಪಟ್ಣ: ತಂಡವೊಂದು ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಎ.24ರಂದು ರಾತ್ರಿ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಎಂಬಲ್ಲಿ ಸಂಭವಿಸಿದೆ.


ಎ. 24 ರಂದು ರಾತ್ರಿ 10ಕ್ಕೆ ಕಾಶಿಪಟ್ಣ ಗ್ರಾಮದ ಮಿತ್ತೋಟ್ಟುಯ ಧರ್ಣಪ್ಪ ಪೂಜಾರಿ ಎಂಬವರ ಮನೆಯ ಬಳಿ ಬಂದು ಅವರ ಪುತ್ರ ಅಭಿಷೇಕ್‌ನನ್ನು ಮೊಬೈಲ್ ಕರೆ ಮಾಡಿ ಮನೆಯ ಬಳಿ ರಸ್ತೆಗೆ ಕರೆದು ಇನ್ ವರ್ಟರ್ ತೆಗೆದುಕೊಂಡು ಬಾ ಎಂದು ಅವಾಚ್ಯ ಶಬ್ದಗಳಿಂದ ಬೈದಾಗ ಇವರೊಳಗೆ ಮಾತಿನ ಚಕಮಕಿ ನಡೆದಿದ್ದು, ಆ ಸಮಯ ಧರ್ಣಪ್ಪ ಪೂಜಾರಿಯವರು ಅಭಿಷೇಕ್‌ನನ್ನು ಮನೆಗೆ ಕರೆದುಕೊಂಡು ಬರುವ ಸಮಯ ಅವರ ಮನೆಯಂಗಳಕ್ಕೆ ಅಕ್ರಮ ಪ್ರವೇಶಮಾಡಿ, ಜಗ್ಗು @ ಜಗದೀಶ್ ಎಂಬಾತ ಧರ್ಣಪ್ಪ ಪೂಜಾರಿಯವರಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಅವರ ಪುತ್ರ ಅಭಿಷೇಕ್‌ಗೆ ಸುಜಿತ್, ಆಕಾಶ್, ಸವಿನ್, ಸಂಜಯ್‌ಸೇರಿ ಕೈಯಿಂದ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಆ ಸಮಯ ಮನೆಯಲಿದ್ದ ಧರ್ಣಪ್ಪ ಪೂಜಾರಿಯವರ ದೊಡ್ಡ ಮಗ ಅನಿಲ್, ಮಗಳು ಆಶಾ, ಮತ್ತು ಪತ್ನಿ ಬೇಬಿರವರಿಗೂ ಅವರು ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿ ಒಡ್ಡಿರುವುದಾಗಿ ಧರ್ಣಪ್ಪ ಪೂಜಾರಿಯವರು ವೇಣೂರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!