September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇನ್ವರ್ಟರ್ ನೀಡುವಂತೆ ಮನೆಗೆ ಕೇಳಲು ಹೋಗಿದ್ದವರಿಗೆ ಕತ್ತಿಯಿಂದ ಹಲ್ಲೆ

ಕಾಶಿಪಟ್ಣ: ಇನ್ವರ್ಟರ್ ನೀಡುವಂತೆ ಮನೆ ಬಳಿಗೆ ಹೋಗಿದ್ದವರಿಗೆ ಕತ್ತಿಯಿಂದ ಕಡಿದು, ಟಾರ್ಚ್ ಲೈಟ್‌ನಿಂದ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿದ ಘಟನೆ ಎ.24 ರಂದು ರಾತ್ರಿ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಎಂಬಲ್ಲಿ ಸಂಭವಿಸಿದೆ.

ಮರೋಡಿ ಗ್ರಾಮದ ಪೆಂಚಾರ್ ಪಿಜತಕಟ್ಟೆ ನಿವಾಸಿ ಸುಜಿತ್ ಎಂಬವರೊಂದಿಗೆ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಅಭಿಷೇಕ್ ಕೆಲಸ ಮಾಡಿಕೊಂಡಿದ್ದು, ಅಭಿಷೇಕ್‌ನ ಮನೆಯಲ್ಲಿ ಇಟ್ಟಿದ್ದ ಇನವರ್ಟರ್‌ನ್ನು ವಾಪಾಸು ಅಂಗಡಿಗೆ ತಂದುಕೊಡುವಂತೆ ಸುಜಿತ್ ಕೇಳಿದಾಗ ಬೇಕಾದಲ್ಲಿ ಮನೆಗೆ ಬಂದು ತೆಗೆದುಕೊಂಡು ಹೋಗುವಂತೆ ಅಭಿಷೇಕ್ ತಿಳಿಸಿದ್ದನೆನ್ನಲಾಗಿದೆ.


ಅದರಂತೆ ಎ.24 ರಂದು ರಾತ್ರಿ 10 ಗಂಟೆಗೆ ಸುಜಿತ್ ತನ್ನ ಸ್ನೇಹಿತರಾದ ಆಕಾಶ್, ಜಗದೀಶ @ ಜಗ್ಗು, ಸಂಜಯ್ ಮತ್ತು ಸವಿನ್ ಎಂಬವರೊಂದಿಗೆ ಕಾಶಿಪಟ್ಣ ಮಿತ್ತೊಟ್ಟು ಅಭಿಷೇಕ್‌ನ ಮನೆಯ ಬಳಿಗೆ ಬಂದು ಇನ್ ವರ್ಟರ್ ಕೇಳಿದಾಗ, ಅಭಿಷೇಕ್ ಇನವರ್ಟರ್ ಕೊಡುವುದಿಲ್ಲ, ನೀನು ಏನು ಮಾಡುತ್ತೀಯಾ ಎಂದು ಅವ್ಯಾಚ್ಯ ಶಬ್ದಗಳಿಂದ ಬೈದಾಗ, ಅವರೊಳಗೆ ಮಾತಿನ ಚಕಮಕಿ ನಡೆದು ಅಲ್ಲಿಗೆ ಬಂದ ಅಭಿಷೇಕ್‌ನ ತಂದೆ ಧರ್ಣಪ್ಪ ಪೂಜಾರಿ ಎಂಬವರು ಜಗ್ಗು @ ಜಗದೀಶನಿಗೆ ಟಾರ್ಚ್ ಲೈಟ್ ಹಲ್ಲೆ ನಡೆಸಿ, ಅಭಿಷೇಕನನ್ನು ಮನೆಗೆ ಕರೆದುಕೊಂಡು ಹೋಗಿದ್ದು, ಆ ಸಮಯ ಮನೆಯ ಗೇಟಿನ ಬಳಿ ಸುಜಿತ್, ಅಭಿಷೇಕ್ ನಲ್ಲಿ ಇನ್ ವರ್ಟರ್ ಕೊಡು ಎಂದಾಗ ಅಭಿಷೇಕನು ಕತ್ತಿಯಿಂದ ಸುಜಿತ್ ಹಾಗೂ ಆಕಾಶ್‌ಗೆ ಕಡಿದು, ಧರ್ಣಪ್ಪ ಪೂಜಾರಿ ಟಾರ್ಚ್ ಲೈಟ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಎಸ್‌ಡಿಎಂ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜು ಹಿರಿಯ ವಿದ್ಯಾರ್ಥಿಗಳ ಪುನರ್ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!