23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

ಕೊಯ್ಯೂರು : ಜ.25 ರಂದು ಜರುಗಿದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸಹಕಾರ ಭಾರತಿ 7 ಸ್ಥಾನವನ್ನು ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರು 5 ಸ್ಥಾನಗಳನ್ನು ಪಡೆದು ವಿಜಯಿಗಳಾಗಿದ್ದು, ನ್ಯಾಯಾಲಯದ ಆದೇಶ ಬರುವವರೆಗೆ ಘೋಷಣೆಯನ್ನು ತಡೆಹಿಡಿಯಲಾಗಿತ್ತು.

ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥಗೊಂಡಿರುವುದರಿಂದ ಚುನಾವಣಾ ಅಧಿಕಾರಿಯ ಆದೇಶದಂತೆ ಇಂದು(ಎ. 25,) ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಲ್ಲಿ ಅಧ್ಯಕ್ಷರಾಗಿ ರವೀಂದ್ರನಾಥ್ ಪಿ ಪೆರ್ಮುದೆ , ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ನಿರ್ದೇಶಕರುಗಳಾಗಿ ಅಶೋಕ್ ಕುಮಾರ್, ಉಜ್ವಲ್ ಕುಮಾರ್ ಕೆಆರ್ , ದಾಮೋದರ ಗೌಡ ,ನವೀನ್ ಕುಮಾರ್ ,ಪರಮೇಶ್ವರ ಗೌಡ, ಯತೀಶ, ಕುಸುಮಾವತಿ, ಶೋಭಾ ,ಕೇಶವ ಪೂಜಾರಿ, ಸಂಜೀವ ಮಲೆಕುಡಿಯ ಆಯ್ಕೆಯಾಗಿರುತ್ತಾರೆ.

ಚುನಾವಣಾ ಅಧಿಕಾರಿಯಾಗಿ ಶ್ರೀಮತಿ ಪ್ರತಿಮಾ ಬಿ ವಿ ಚುನಾವಣೆಯ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ವಲಯ ಮೇಲ್ವಿಚಾರಕ ಸುದರ್ಶನ್ ದ.ಕ ಜಿ ಕೇಂದ್ರ ಬ್ಯಾಂಕಿನ ಪ್ರತಿನಿಧಿ ಹಾಜರಿದ್ದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಅನಂತಕೃಷ್ಣ ಭಟ್ ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya
error: Content is protected !!