23.5 C
ಪುತ್ತೂರು, ಬೆಳ್ತಂಗಡಿ
June 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

ಕೊಯ್ಯೂರು : ಜ.25 ರಂದು ಜರುಗಿದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸಹಕಾರ ಭಾರತಿ 7 ಸ್ಥಾನವನ್ನು ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರು 5 ಸ್ಥಾನಗಳನ್ನು ಪಡೆದು ವಿಜಯಿಗಳಾಗಿದ್ದು, ನ್ಯಾಯಾಲಯದ ಆದೇಶ ಬರುವವರೆಗೆ ಘೋಷಣೆಯನ್ನು ತಡೆಹಿಡಿಯಲಾಗಿತ್ತು.

ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥಗೊಂಡಿರುವುದರಿಂದ ಚುನಾವಣಾ ಅಧಿಕಾರಿಯ ಆದೇಶದಂತೆ ಇಂದು(ಎ. 25,) ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಲ್ಲಿ ಅಧ್ಯಕ್ಷರಾಗಿ ರವೀಂದ್ರನಾಥ್ ಪಿ ಪೆರ್ಮುದೆ , ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ನಿರ್ದೇಶಕರುಗಳಾಗಿ ಅಶೋಕ್ ಕುಮಾರ್, ಉಜ್ವಲ್ ಕುಮಾರ್ ಕೆಆರ್ , ದಾಮೋದರ ಗೌಡ ,ನವೀನ್ ಕುಮಾರ್ ,ಪರಮೇಶ್ವರ ಗೌಡ, ಯತೀಶ, ಕುಸುಮಾವತಿ, ಶೋಭಾ ,ಕೇಶವ ಪೂಜಾರಿ, ಸಂಜೀವ ಮಲೆಕುಡಿಯ ಆಯ್ಕೆಯಾಗಿರುತ್ತಾರೆ.

ಚುನಾವಣಾ ಅಧಿಕಾರಿಯಾಗಿ ಶ್ರೀಮತಿ ಪ್ರತಿಮಾ ಬಿ ವಿ ಚುನಾವಣೆಯ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ವಲಯ ಮೇಲ್ವಿಚಾರಕ ಸುದರ್ಶನ್ ದ.ಕ ಜಿ ಕೇಂದ್ರ ಬ್ಯಾಂಕಿನ ಪ್ರತಿನಿಧಿ ಹಾಜರಿದ್ದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಅನಂತಕೃಷ್ಣ ಭಟ್ ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya
error: Content is protected !!