April 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

ಕೊಯ್ಯೂರು : ಜ.25 ರಂದು ಜರುಗಿದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸಹಕಾರ ಭಾರತಿ 7 ಸ್ಥಾನವನ್ನು ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರು 5 ಸ್ಥಾನಗಳನ್ನು ಪಡೆದು ವಿಜಯಿಗಳಾಗಿದ್ದು, ನ್ಯಾಯಾಲಯದ ಆದೇಶ ಬರುವವರೆಗೆ ಘೋಷಣೆಯನ್ನು ತಡೆಹಿಡಿಯಲಾಗಿತ್ತು.

ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥಗೊಂಡಿರುವುದರಿಂದ ಚುನಾವಣಾ ಅಧಿಕಾರಿಯ ಆದೇಶದಂತೆ ಇಂದು(ಎ. 25,) ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಲ್ಲಿ ಅಧ್ಯಕ್ಷರಾಗಿ ರವೀಂದ್ರನಾಥ್ ಪಿ ಪೆರ್ಮುದೆ , ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ನಿರ್ದೇಶಕರುಗಳಾಗಿ ಅಶೋಕ್ ಕುಮಾರ್, ಉಜ್ವಲ್ ಕುಮಾರ್ ಕೆಆರ್ , ದಾಮೋದರ ಗೌಡ ,ನವೀನ್ ಕುಮಾರ್ ,ಪರಮೇಶ್ವರ ಗೌಡ, ಯತೀಶ, ಕುಸುಮಾವತಿ, ಶೋಭಾ ,ಕೇಶವ ಪೂಜಾರಿ, ಸಂಜೀವ ಮಲೆಕುಡಿಯ ಆಯ್ಕೆಯಾಗಿರುತ್ತಾರೆ.

ಚುನಾವಣಾ ಅಧಿಕಾರಿಯಾಗಿ ಶ್ರೀಮತಿ ಪ್ರತಿಮಾ ಬಿ ವಿ ಚುನಾವಣೆಯ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ವಲಯ ಮೇಲ್ವಿಚಾರಕ ಸುದರ್ಶನ್ ದ.ಕ ಜಿ ಕೇಂದ್ರ ಬ್ಯಾಂಕಿನ ಪ್ರತಿನಿಧಿ ಹಾಜರಿದ್ದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಅನಂತಕೃಷ್ಣ ಭಟ್ ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya
error: Content is protected !!