22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

ತೆಕ್ಕಾರು ಭಟ್ರಬೈಲು ದೇವರಗುಡ್ಡ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ದೇವರ ಆಭರಣ, ಉತ್ಸವ ಮೂರ್ತಿಯನ್ನು ಬಿ.ಸಿ.ರೋಡಿನ ಶ್ರೀ ರಕೇಶ್ವರೀ ದೇವಿ ಸನ್ನಿಧಿಯ ಬಳಿಯಿಂದ ತೆಕ್ಕಾರು ದೇವಸ್ಥಾನಕ್ಕೆ ಸಾಗಿಸಲಾಯಿತು. ಶ್ರೀ ರಕೇಶ್ವರೀ ಸನ್ನಿಧಿಯ ಅರ್ಚಕ ರಘುಪತಿ ಭಟ್ ಅವರು ಪ್ರಾರ್ಥನೆ ಸಲ್ಲಿಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಶ್ರೀ ರಕೇಶ್ವರೀ ಸನ್ನಿಧಿ ಸೇವಾ ಸಮಿತಿ ಅಧ್ಯಕ್ಷ ವಿಶ್ವನಾಥ್ ಬಿ, ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ಸಂಪತ್‌ಕುಮಾ‌ರ್ ಶೆಟ್ಟಿ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಜಯಂತಿ ಪೂಜಾರಿ, ವೆಂಕಪ್ಪ ಪೂಜಾರಿ, ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸೇವಾ ಟ್ರಸ್ಟ್ ಸಂಚಾಲಕ ಲಕ್ಷಣ್ ಭಟ್ರಬೈಲು, ಕಾರ್ಯದರ್ಶಿ ಮಂಜುನಾಥ ಸಾಲ್ಯಾನ್ ಬಡೆಗ್ರಾಮ, ಕೋಶಾಧಿಕಾರಿ ಸುರೇಶ್ ಪಿ.ಪುಳಿತ್ತಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತುಕರಾಮ್ ನಾಯಕ್ ಬಿ, ಉಪಾಧ್ಯಕ್ಷ ತುಳಸೀಧರ ಬೇನೆಪ್ಪು, ಸದಸ್ಯ ಶರತ್ ಆನಲೆ ಉಪಸ್ಥಿತರಿದ್ದರು.

ವಿವಿಧ ವಾಹನಗಳ ಮೂಲಕ ನೂರಾರು ಭಕ್ತರು ಪಾಲ್ಗೊಂಡಿದ್ದರು.

Related posts

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಮಡಂತ್ಯಾರು ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ: ಶೇ.12 ಡಿವಿಡೆಂಟ್ ಘೋಷಣೆ

Suddi Udaya

ಧರ್ಮಸ್ಥಳ: ಪೊದುಂಬಿಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya
error: Content is protected !!