23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕಾಗಿ ಸಂಪೂರ್ಣ ರೀತಿಯಲ್ಲಿ ಸಹಕಾರವನ್ನು ನೀಡುತ್ತಿರುವ ಬೆಳ್ತಂಗಡಿಯ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಲ್ಯಾನ್ಸಿ ಎ ಪಿರೇರಾ ಹಾಗೂ ಸಂಸ್ಥೆಯ ಮುಖ್ಯ ಪ್ರಬಂಧಕರಾದ ಶ್ರೀಮತಿ ಐರಿನ್ ಡಿಸೋಜ ಹಾಗೂ ಸಿಬ್ಬಂದಿಗಳನ್ನು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಕೇಂದ್ರ ಕಚೇರಿಯ ಪರವಾಗಿ ಬೆಳ್ತಂಗಡಿ ಶಾಖಾ ಕಛೇರಿ ವತಿಯಿಂದ ಬ್ಯಾಂಕಿನ ನಿರ್ದೇಶಕರಾದ ಧರಣೇಂದ್ರ ಕೆ ರವರು ಗೌರವಿಸಿದರು.

ಗೌರವವನ್ನು ಸ್ವೀಕರಿಸಿದ ಲ್ಯಾನ್ಸಿ ಪಿರೇರರವರು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಸಿಬ್ಬಂದಿಗಳ ಕಾರ್ಯ ಮೆಚ್ಚುವ ರೀತಿಯಲ್ಲಿ ಇರುವ ಕಾರಣ ನಮ್ಮ ಸಂಸ್ಥೆಯು ಕೂಡ ತಮ್ಮ ಬ್ಯಾಂಕಿನೊಂದಿಗೆ ಸದಾ ಸಹಕಾರಕ್ಕೆ ಬದ್ಧವಾಗಿದೆ. ತಮ್ಮ ಈ ಸೇವೆಯು ಮುಂದೆಯು ಕೂಡ ಇದೇ ರೀತಿ ಮುಂದುವರೆಯಲಿ, ಅದೇ ರೀತಿಯಲ್ಲಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ನಮ್ಮ ಸಹೋದರ ಧರಣೇಂದ್ರ ರವರು ಕೂಡ ಉತ್ತಮ ಸೇವೆಯನ್ನು ಮಾಡುವಂತಾಗಲಿ ಎಂದು ಮನದಾಳದ ಮಾತುಗಳನ್ನು ಹಂಚಿಕೊಂಡರು.


ಈ ಸಂದರ್ಭದಲ್ಲಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯಯ ಶಾಖಾ ಪ್ರಬಂಧಕರಾದ ಚೇತನ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಗಣೇಶ್ ಮತ್ತು ಅನಿಲ್ ಕುಮಾರ್ ಕೆ ಜಿ ಉಪಸ್ಥಿತರಿದ್ದರು.

Related posts

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ

Suddi Udaya

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya
error: Content is protected !!