23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕಾಗಿ ಸಂಪೂರ್ಣ ರೀತಿಯಲ್ಲಿ ಸಹಕಾರವನ್ನು ನೀಡುತ್ತಿರುವ ಬೆಳ್ತಂಗಡಿಯ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಲ್ಯಾನ್ಸಿ ಎ ಪಿರೇರಾ ಹಾಗೂ ಸಂಸ್ಥೆಯ ಮುಖ್ಯ ಪ್ರಬಂಧಕರಾದ ಶ್ರೀಮತಿ ಐರಿನ್ ಡಿಸೋಜ ಹಾಗೂ ಸಿಬ್ಬಂದಿಗಳನ್ನು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಕೇಂದ್ರ ಕಚೇರಿಯ ಪರವಾಗಿ ಬೆಳ್ತಂಗಡಿ ಶಾಖಾ ಕಛೇರಿ ವತಿಯಿಂದ ಬ್ಯಾಂಕಿನ ನಿರ್ದೇಶಕರಾದ ಧರಣೇಂದ್ರ ಕೆ ರವರು ಗೌರವಿಸಿದರು.

ಗೌರವವನ್ನು ಸ್ವೀಕರಿಸಿದ ಲ್ಯಾನ್ಸಿ ಪಿರೇರರವರು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಸಿಬ್ಬಂದಿಗಳ ಕಾರ್ಯ ಮೆಚ್ಚುವ ರೀತಿಯಲ್ಲಿ ಇರುವ ಕಾರಣ ನಮ್ಮ ಸಂಸ್ಥೆಯು ಕೂಡ ತಮ್ಮ ಬ್ಯಾಂಕಿನೊಂದಿಗೆ ಸದಾ ಸಹಕಾರಕ್ಕೆ ಬದ್ಧವಾಗಿದೆ. ತಮ್ಮ ಈ ಸೇವೆಯು ಮುಂದೆಯು ಕೂಡ ಇದೇ ರೀತಿ ಮುಂದುವರೆಯಲಿ, ಅದೇ ರೀತಿಯಲ್ಲಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ನಮ್ಮ ಸಹೋದರ ಧರಣೇಂದ್ರ ರವರು ಕೂಡ ಉತ್ತಮ ಸೇವೆಯನ್ನು ಮಾಡುವಂತಾಗಲಿ ಎಂದು ಮನದಾಳದ ಮಾತುಗಳನ್ನು ಹಂಚಿಕೊಂಡರು.


ಈ ಸಂದರ್ಭದಲ್ಲಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯಯ ಶಾಖಾ ಪ್ರಬಂಧಕರಾದ ಚೇತನ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಗಣೇಶ್ ಮತ್ತು ಅನಿಲ್ ಕುಮಾರ್ ಕೆ ಜಿ ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!