25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕಾಗಿ ಸಂಪೂರ್ಣ ರೀತಿಯಲ್ಲಿ ಸಹಕಾರವನ್ನು ನೀಡುತ್ತಿರುವ ಬೆಳ್ತಂಗಡಿಯ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಲ್ಯಾನ್ಸಿ ಎ ಪಿರೇರಾ ಹಾಗೂ ಸಂಸ್ಥೆಯ ಮುಖ್ಯ ಪ್ರಬಂಧಕರಾದ ಶ್ರೀಮತಿ ಐರಿನ್ ಡಿಸೋಜ ಹಾಗೂ ಸಿಬ್ಬಂದಿಗಳನ್ನು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಕೇಂದ್ರ ಕಚೇರಿಯ ಪರವಾಗಿ ಬೆಳ್ತಂಗಡಿ ಶಾಖಾ ಕಛೇರಿ ವತಿಯಿಂದ ಬ್ಯಾಂಕಿನ ನಿರ್ದೇಶಕರಾದ ಧರಣೇಂದ್ರ ಕೆ ರವರು ಗೌರವಿಸಿದರು.

ಗೌರವವನ್ನು ಸ್ವೀಕರಿಸಿದ ಲ್ಯಾನ್ಸಿ ಪಿರೇರರವರು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಸಿಬ್ಬಂದಿಗಳ ಕಾರ್ಯ ಮೆಚ್ಚುವ ರೀತಿಯಲ್ಲಿ ಇರುವ ಕಾರಣ ನಮ್ಮ ಸಂಸ್ಥೆಯು ಕೂಡ ತಮ್ಮ ಬ್ಯಾಂಕಿನೊಂದಿಗೆ ಸದಾ ಸಹಕಾರಕ್ಕೆ ಬದ್ಧವಾಗಿದೆ. ತಮ್ಮ ಈ ಸೇವೆಯು ಮುಂದೆಯು ಕೂಡ ಇದೇ ರೀತಿ ಮುಂದುವರೆಯಲಿ, ಅದೇ ರೀತಿಯಲ್ಲಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ನಮ್ಮ ಸಹೋದರ ಧರಣೇಂದ್ರ ರವರು ಕೂಡ ಉತ್ತಮ ಸೇವೆಯನ್ನು ಮಾಡುವಂತಾಗಲಿ ಎಂದು ಮನದಾಳದ ಮಾತುಗಳನ್ನು ಹಂಚಿಕೊಂಡರು.


ಈ ಸಂದರ್ಭದಲ್ಲಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯಯ ಶಾಖಾ ಪ್ರಬಂಧಕರಾದ ಚೇತನ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಗಣೇಶ್ ಮತ್ತು ಅನಿಲ್ ಕುಮಾರ್ ಕೆ ಜಿ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya
error: Content is protected !!