September 6, 2026
Uncategorized

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

ಗುರುವಾಯನಕೆರೆ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಪದವಿ ಪೂರ್ವ ಶಿಕ್ಷಣದಲ್ಲಿ ರಾಜ್ಯ – ರಾಷ್ಟ್ರಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಈ ಶೈಕ್ಷಣಿಕ ವರ್ಷದಿಂದ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಆಂಗ್ಲ ಮಾಧ್ಯಮದ ಒಂದನೆಯ ತರಗತಿ ಪ್ರಾರಂಭಗೊಳ್ಳಲಿದೆ.

ಆಯಾ ಕ್ಷೇತ್ರಗಳಲ್ಲಿ 20 ವರ್ಷಗಳಿಗೂ ಮೀರಿದ ಅನುಭವ ಇರುವ ಶಿಕ್ಷಕರು ಬೋಧಿಸಲಿದ್ದಾರೆ. ಆಕರ್ಷಕ ತರಗತಿ ಕೋಣೆ, ಮಕ್ಕಳ ವಯೋಮಾನಕ್ಕೆ ಸೂಕ್ತ ಪೀಠೋಪಕರಣಗಳು,ಆಟಿಕೆ ವಸ್ತುಗಳು,ಆಟದೊಂದಿಗೆ ಪಾಠ, ಆಂಗ್ಲ ಭಾಷಾ ಪ್ರಾವೀಣ್ಯತೆ, ಭಾರತೀಯ ಸಂಸ್ಕೃತಿಯ ಮೈಗೊಡಿಸುವಿಕೆ, ನಾಡು – ನುಡಿಯ ಅಭಿಮಾನ ಸೇರಿದಂತೆ ಮಗುವಿನ ಸರ್ವತೋಮುಖ ಬೆಳವಣಿಗೆಯೆ ಧ್ಯೇಯವಾಗಿ ಶಾಲೆ ನಿರಂತರ ಚಟುವಟಿಕೆಯ ಕೇಂದ್ರವಾಗಿ ಮುನ್ನಡೆಯಲಿದೆ .

ಬೆಳ್ತಂಗಡಿ ಹಾಗೂ ಆಸುಪಾಸಿನ ಹೆತ್ತವರ ಬೇಡಿಕೆಗೆ ಸ್ಪಂದಿಸಿ, ವೇಣೂರಿನಲ್ಲಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುವುದರ ಜೊತೆಗೆ, ಗುರುವಾಯನಕೆರೆಯಲ್ಲೂ ನೂತನ ಶಾಲೆ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9880899769 , 9900626441 ಸಂಪರ್ಕಿಸಲು ಕೋರಲಾಗಿದೆ.

Related posts

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಬಂದಾರು: 80ನೇ ಸ್ವಾತಂತ್ರ್ಯೋತ್ಸವ ಮತ್ತು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮ : ಗ್ರಾಮೀಣ ಸರಕಾರಿ ಶಾಲೆಯನ್ನು ಉಳಿಸುವ ಸಂಕಲ್ಪ : ಮೋಹನ್ ಕುಮಾರ್

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya
error: Content is protected !!