24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಯುವ ಬಂಟರ ಹಾಗೂ ಮಹಿಳಾ ಬಂಟರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಎ.27 ರಂದು ಗುರುವಾಯನಕೆರೆಯ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಲಿದೆ.

ಈ ಕ್ರೀಡೋತ್ಸವದಲ್ಲಿ ಪಥಸಂಚಲನವು ವಿಶೇಷ ಆಕರ್ಷಣೆಯಾಗಿದ್ದು, ಬೆಳಿಗ್ಗೆ 9 ಗಂಟೆಗೆ ನವಶಕ್ತಿ ಕ್ರೀಡಾಂಗಣದಲ್ಲಿ 9 ವಲಯಗಳ ಕ್ರೀಡಾಳುಗಳು ಮತ್ತು ಬಂಟ ಸಮುದಾಯದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿಸ್ತುಬದ್ಧ ಮತ್ತು ಆಕರ್ಶಕವಾಗಿ ಪಥ ಸಂಚಲನ ನಡೆಸಿಕೊಟ್ಟ ತಂಡಗಳಿಗೆ ಹಾಗೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಂಡ ವಲಯಗಳಿಗೆ ಬಹುಮಾನ ನೀಡಲಾಗುತ್ತದೆ. ಕ್ರೀಡೋತ್ಸವದಲ್ಲಿ 6 ವರ್ಷದ ಒಳಗಿನ ಬಾಲಕ/ಬಾಲಕಿಯರಿಗೆ 50 ಮೀ ಓಟ, ಚೆಂಡು ಎಸೆತ, ಕಪ್ಪೆ ಜಿಗಿತ, 12 ವರ್ಗದ ಒಳಗಿನ ಬಾಲಕ/ಬಾಲಕಿಯರಿಗೆ 80 ಮೀ ಓಟ, ಚೆಂಡು ಎಸೆತ, ಲಿಂಬೆ ಚಮಚ, 17 ವರ್ಷದ ಒಳಗಿನ ಬಾಲಕ / ಬಾಲಕಿಯರಿಗೆ 100, 200, 40 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (18 ರಿಂದ 40 ವರ್ಷ) 100ಮೀ ಓಟ, 200ಮೀ ಓಟ, ಗುಂಡೆಸೆತ, 60 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (41ರಿಂದ 60ವರ್ಷ) 100ಮೀ ಓಟ, 200ಮೀ ವೇಗದ ನಡಿಗೆ, ಗುಂಡೆಸೆತ, 60 ವರ್ಷ ಮೇಲ್ಪಟ್ಟ ಹಿರಿಯರಿಗೆ (ಪುರುಷರು/ ಮಹಿಳೆಯರು): 100 ಮೀ ವೇಗದ ನಡಿಗೆ, ಗುಂಡೆಸೆತ, ಪುರುಷರಿಗೆ ವಾಲಿಬಾಲ್ (6+1), ಮಹಿಳೆಯರಿಗೆ ತ್ರೋಬಾಲ್ (9+1), ಹಗ್ಗ ಜಗ್ಗಾಟ (9+2) ಇರುವುದು. ವಿಜೇತರಿಗೆ ದೇವು ಪೂಂಜ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಬಂಟರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya
error: Content is protected !!