25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಯುವ ಬಂಟರ ಹಾಗೂ ಮಹಿಳಾ ಬಂಟರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಎ.27 ರಂದು ಗುರುವಾಯನಕೆರೆಯ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಲಿದೆ.

ಈ ಕ್ರೀಡೋತ್ಸವದಲ್ಲಿ ಪಥಸಂಚಲನವು ವಿಶೇಷ ಆಕರ್ಷಣೆಯಾಗಿದ್ದು, ಬೆಳಿಗ್ಗೆ 9 ಗಂಟೆಗೆ ನವಶಕ್ತಿ ಕ್ರೀಡಾಂಗಣದಲ್ಲಿ 9 ವಲಯಗಳ ಕ್ರೀಡಾಳುಗಳು ಮತ್ತು ಬಂಟ ಸಮುದಾಯದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿಸ್ತುಬದ್ಧ ಮತ್ತು ಆಕರ್ಶಕವಾಗಿ ಪಥ ಸಂಚಲನ ನಡೆಸಿಕೊಟ್ಟ ತಂಡಗಳಿಗೆ ಹಾಗೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಂಡ ವಲಯಗಳಿಗೆ ಬಹುಮಾನ ನೀಡಲಾಗುತ್ತದೆ. ಕ್ರೀಡೋತ್ಸವದಲ್ಲಿ 6 ವರ್ಷದ ಒಳಗಿನ ಬಾಲಕ/ಬಾಲಕಿಯರಿಗೆ 50 ಮೀ ಓಟ, ಚೆಂಡು ಎಸೆತ, ಕಪ್ಪೆ ಜಿಗಿತ, 12 ವರ್ಗದ ಒಳಗಿನ ಬಾಲಕ/ಬಾಲಕಿಯರಿಗೆ 80 ಮೀ ಓಟ, ಚೆಂಡು ಎಸೆತ, ಲಿಂಬೆ ಚಮಚ, 17 ವರ್ಷದ ಒಳಗಿನ ಬಾಲಕ / ಬಾಲಕಿಯರಿಗೆ 100, 200, 40 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (18 ರಿಂದ 40 ವರ್ಷ) 100ಮೀ ಓಟ, 200ಮೀ ಓಟ, ಗುಂಡೆಸೆತ, 60 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (41ರಿಂದ 60ವರ್ಷ) 100ಮೀ ಓಟ, 200ಮೀ ವೇಗದ ನಡಿಗೆ, ಗುಂಡೆಸೆತ, 60 ವರ್ಷ ಮೇಲ್ಪಟ್ಟ ಹಿರಿಯರಿಗೆ (ಪುರುಷರು/ ಮಹಿಳೆಯರು): 100 ಮೀ ವೇಗದ ನಡಿಗೆ, ಗುಂಡೆಸೆತ, ಪುರುಷರಿಗೆ ವಾಲಿಬಾಲ್ (6+1), ಮಹಿಳೆಯರಿಗೆ ತ್ರೋಬಾಲ್ (9+1), ಹಗ್ಗ ಜಗ್ಗಾಟ (9+2) ಇರುವುದು. ವಿಜೇತರಿಗೆ ದೇವು ಪೂಂಜ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಬಂಟರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya
error: Content is protected !!