July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಯುವ ಬಂಟರ ಹಾಗೂ ಮಹಿಳಾ ಬಂಟರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಎ.27 ರಂದು ಗುರುವಾಯನಕೆರೆಯ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಲಿದೆ.

ಈ ಕ್ರೀಡೋತ್ಸವದಲ್ಲಿ ಪಥಸಂಚಲನವು ವಿಶೇಷ ಆಕರ್ಷಣೆಯಾಗಿದ್ದು, ಬೆಳಿಗ್ಗೆ 9 ಗಂಟೆಗೆ ನವಶಕ್ತಿ ಕ್ರೀಡಾಂಗಣದಲ್ಲಿ 9 ವಲಯಗಳ ಕ್ರೀಡಾಳುಗಳು ಮತ್ತು ಬಂಟ ಸಮುದಾಯದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿಸ್ತುಬದ್ಧ ಮತ್ತು ಆಕರ್ಶಕವಾಗಿ ಪಥ ಸಂಚಲನ ನಡೆಸಿಕೊಟ್ಟ ತಂಡಗಳಿಗೆ ಹಾಗೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಂಡ ವಲಯಗಳಿಗೆ ಬಹುಮಾನ ನೀಡಲಾಗುತ್ತದೆ. ಕ್ರೀಡೋತ್ಸವದಲ್ಲಿ 6 ವರ್ಷದ ಒಳಗಿನ ಬಾಲಕ/ಬಾಲಕಿಯರಿಗೆ 50 ಮೀ ಓಟ, ಚೆಂಡು ಎಸೆತ, ಕಪ್ಪೆ ಜಿಗಿತ, 12 ವರ್ಗದ ಒಳಗಿನ ಬಾಲಕ/ಬಾಲಕಿಯರಿಗೆ 80 ಮೀ ಓಟ, ಚೆಂಡು ಎಸೆತ, ಲಿಂಬೆ ಚಮಚ, 17 ವರ್ಷದ ಒಳಗಿನ ಬಾಲಕ / ಬಾಲಕಿಯರಿಗೆ 100, 200, 40 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (18 ರಿಂದ 40 ವರ್ಷ) 100ಮೀ ಓಟ, 200ಮೀ ಓಟ, ಗುಂಡೆಸೆತ, 60 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (41ರಿಂದ 60ವರ್ಷ) 100ಮೀ ಓಟ, 200ಮೀ ವೇಗದ ನಡಿಗೆ, ಗುಂಡೆಸೆತ, 60 ವರ್ಷ ಮೇಲ್ಪಟ್ಟ ಹಿರಿಯರಿಗೆ (ಪುರುಷರು/ ಮಹಿಳೆಯರು): 100 ಮೀ ವೇಗದ ನಡಿಗೆ, ಗುಂಡೆಸೆತ, ಪುರುಷರಿಗೆ ವಾಲಿಬಾಲ್ (6+1), ಮಹಿಳೆಯರಿಗೆ ತ್ರೋಬಾಲ್ (9+1), ಹಗ್ಗ ಜಗ್ಗಾಟ (9+2) ಇರುವುದು. ವಿಜೇತರಿಗೆ ದೇವು ಪೂಂಜ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಬಂಟರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!