25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

ಸುಲ್ಕೇರಿ: ಸುಲ್ಕೇರಿ ನರ್ಸರಿ ಬಳಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ ಹೊಡೆದು ಟಾಟಾ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ.24 ರಂದು ರಾತ್ರಿ ನಡೆದಿದೆ.

ಎ.24 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಸುಲ್ಕೇರಿ ಗ್ರಾಮದ ಸುಲ್ಕೇರಿ ನರ್ಸರಿ ಬಳಿ ಗುರುವಾಯನಕೆರೆ – ನಾರಾವಿ – ಕಾರ್ಕಳ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಗುರುವಾಯನಕೆರೆ ಕಡೆಯಿಂದ ಈಚರ್ ಲಾರಿಯ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೇಲೆ ರಸ್ತೆಯ ಬಲಬದಿಗೆ ಚಲಾಯಿಸಿ ನಾರಾವಿ ಕಡೆಯಿಂದ ಗಣೇಶ್ ಗೌಡ ರವರು ಚಲಾಯಿಸಿಕೊಂಡು ಬರುತ್ತಿದ್ದ ಟಾಟಾ 407 ಗೂಡ್ಸ್ ವಾಹನ ಕ್ಕೆ ಬಲಬದಿ ಚಾಲಕನ ಡೋರ್‌ ಬಳಿಗೆ ರಭಸದಿಂದ ಡಿಕ್ಕಿ ಹೊಡೆದು ಅಪಘಾತ ಉಂಟುಮಾಡಿ ಬಳಿಕ ಈಚರ್ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದು, ಅಪಘಾತದಿಂದ ಗಣೇಶ್ ಗೌಡ ರವರ ವಾಹನ ಜಖಂಗೊಂಡಿದ್ದು, ಗಣೇಶ್ ಗೌಡ ರವರ ಸೊಂಟಕ್ಕೆ, ಬಲಕಾಲಿಗೆ ಗುದ್ದಿದ ಗಾಯಗಳಾಗಿ ಉಜಿರೆ ಬೆನಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!