26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

ಸುಲ್ಕೇರಿ: ಸುಲ್ಕೇರಿ ನರ್ಸರಿ ಬಳಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ ಹೊಡೆದು ಟಾಟಾ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ.24 ರಂದು ರಾತ್ರಿ ನಡೆದಿದೆ.

ಎ.24 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಸುಲ್ಕೇರಿ ಗ್ರಾಮದ ಸುಲ್ಕೇರಿ ನರ್ಸರಿ ಬಳಿ ಗುರುವಾಯನಕೆರೆ – ನಾರಾವಿ – ಕಾರ್ಕಳ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಗುರುವಾಯನಕೆರೆ ಕಡೆಯಿಂದ ಈಚರ್ ಲಾರಿಯ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೇಲೆ ರಸ್ತೆಯ ಬಲಬದಿಗೆ ಚಲಾಯಿಸಿ ನಾರಾವಿ ಕಡೆಯಿಂದ ಗಣೇಶ್ ಗೌಡ ರವರು ಚಲಾಯಿಸಿಕೊಂಡು ಬರುತ್ತಿದ್ದ ಟಾಟಾ 407 ಗೂಡ್ಸ್ ವಾಹನ ಕ್ಕೆ ಬಲಬದಿ ಚಾಲಕನ ಡೋರ್‌ ಬಳಿಗೆ ರಭಸದಿಂದ ಡಿಕ್ಕಿ ಹೊಡೆದು ಅಪಘಾತ ಉಂಟುಮಾಡಿ ಬಳಿಕ ಈಚರ್ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದು, ಅಪಘಾತದಿಂದ ಗಣೇಶ್ ಗೌಡ ರವರ ವಾಹನ ಜಖಂಗೊಂಡಿದ್ದು, ಗಣೇಶ್ ಗೌಡ ರವರ ಸೊಂಟಕ್ಕೆ, ಬಲಕಾಲಿಗೆ ಗುದ್ದಿದ ಗಾಯಗಳಾಗಿ ಉಜಿರೆ ಬೆನಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

Suddi Udaya
error: Content is protected !!