22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

ಗುರುವಾಯನಕೆರೆ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಪದವಿ ಪೂರ್ವ ಶಿಕ್ಷಣದಲ್ಲಿ ರಾಜ್ಯ – ರಾಷ್ಟ್ರಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಈ ಶೈಕ್ಷಣಿಕ ವರ್ಷದಿಂದ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಆಂಗ್ಲ ಮಾಧ್ಯಮದ ಒಂದನೆಯ ತರಗತಿ ಪ್ರಾರಂಭಗೊಳ್ಳಲಿದೆ.

ಆಯಾ ಕ್ಷೇತ್ರಗಳಲ್ಲಿ 20 ವರ್ಷಗಳಿಗೂ ಮೀರಿದ ಅನುಭವ ಇರುವ ಶಿಕ್ಷಕರು ಬೋಧಿಸಲಿದ್ದಾರೆ. ಆಕರ್ಷಕ ತರಗತಿ ಕೋಣೆ, ಮಕ್ಕಳ ವಯೋಮಾನಕ್ಕೆ ಸೂಕ್ತ ಪೀಠೋಪಕರಣಗಳು,ಆಟಿಕೆ ವಸ್ತುಗಳು,ಆಟದೊಂದಿಗೆ ಪಾಠ, ಆಂಗ್ಲ ಭಾಷಾ ಪ್ರಾವೀಣ್ಯತೆ, ಭಾರತೀಯ ಸಂಸ್ಕೃತಿಯ ಮೈಗೊಡಿಸುವಿಕೆ, ನಾಡು – ನುಡಿಯ ಅಭಿಮಾನ ಸೇರಿದಂತೆ ಮಗುವಿನ ಸರ್ವತೋಮುಖ ಬೆಳವಣಿಗೆಯೆ ಧ್ಯೇಯವಾಗಿ ಶಾಲೆ ನಿರಂತರ ಚಟುವಟಿಕೆಯ ಕೇಂದ್ರವಾಗಿ ಮುನ್ನಡೆಯಲಿದೆ .

ಬೆಳ್ತಂಗಡಿ ಹಾಗೂ ಆಸುಪಾಸಿನ ಹೆತ್ತವರ ಬೇಡಿಕೆಗೆ ಸ್ಪಂದಿಸಿ, ವೇಣೂರಿನಲ್ಲಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುವುದರ ಜೊತೆಗೆ, ಗುರುವಾಯನಕೆರೆಯಲ್ಲೂ ನೂತನ ಶಾಲೆ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9880899769 , 9900626441 ಸಂಪರ್ಕಿಸಲು ಕೋರಲಾಗಿದೆ.

Related posts

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

Suddi Udaya
error: Content is protected !!