22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

ಮಲವಂತಿಗೆ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಸಾರ್ವಜನಿಕರು, ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ ಎ.25 ರಂದು
ದಿಡುಪೆ ಪಂಚಾಯತ್ ಮುಂಭಾಗದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮದ ಸರ್ವ ಪಕ್ಷದ ಮುಖಂಡರು ಭಾಗಿಯಾಗಿದ್ದರು. ತೀಕ್ಷಿತ್ ಕೆ ಕಲ್ಬೆಟ್ಟು ಸ್ವಾಗತಿಸಿ ಮಾತನಾಡಿ ,ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸಿ, ಸೈನಿಕರ ಜೊತೆ ರಾಷ್ಟ್ರ ರಕ್ಷಣೆ ನಮ್ಮ ಭಾರತ ದೇಶದ ಪ್ರತಿಯೊಂದು ಹಿಂದೂ ಕಾರ್ಯಕರ್ತರು ಹಾಗೂ ಪ್ರಜೆಗಳು ಬೇಕು. ರಾಷ್ಟ್ರ ವಿರೋಧಿಗಳನ್ನು ದೇಶ ಬಿಟ್ಟು ತೊಲಗುವಂತೆ ಮಾಡಬೇಕು. ನಮ್ಮ ದೇಶದ ರಕ್ಷಣೆ ಮೊದಲು. ಪಾಕಿಸ್ತಾನಕ್ಕೆ ಧಿಕ್ಕಾರ ಹಾಕುವ ಮೂಲಕ ಹುತಾತ್ಮರಾದ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದೇವರು ಕಾಪಾಡುವಂತೆ ನುಡಿದರು.

ಅದೇ ರೀತಿ ವಕ್ತರರಾದ ಜಯಂತ ಹೆಗ್ಡೆ ಹೊಸತೋಟ ಮಾತನಾಡಿ ದೇಶದ ಚಿಂತನೆ ಮುಖ್ಯವಾಗಿ ಎಲ್ಲರಿಗೂ ಇರಬೇಕು. ದೇಶದಲ್ಲಿ ಉಗ್ರರನ್ನು ಮಟ್ಟ ಹಾಕುವ ಕೆಲಸ ಭಾರತ ದೇಶದಲ್ಲಿ ನಡೆಯಬೇಕು ಎಂದರು.
ತಾಲೂಕು ಪಂಚಾಯತ್ ಮಾಜಿ ಸದಸ್ಯ ಕಾಂಗ್ರೇಸ್ ಮುಖಂಡರಾದ ಜಯರಾಮ್ ಅಲಂಗಾರ್ ಇವರು ಮಾತಾಡಿ ಮಾನವ ಧರ್ಮ ಪಾಲನೆ ಅತೀ ಮುಖ್ಯ, ಭಾರತ ಪ್ರಜೆಯಾಗಿ ಬದುಕಲು ಕಲಿಯಬೇಕು ಎಂದು ತಿಳಿಸಿದರು.

ಮಧುಸೂಧನ್ ಮಲ್ಲ ಮಾತಾಡಿ ಭಾರತ ದೇಶದಲ್ಲಿ ಇದ್ದುಕೊಂಡು ರಾಷ್ಟ್ರ ವಿರೋಧಿ ಚಟುವಟಿಕೆ ಮಾಡುವ ವ್ಯಕ್ತಿಗಳನ್ನು ಮೊದಲು ದೇಶ ಬಿಟ್ಟು ಹೊಡಿಸಬೇಕು ಎಂದು ನುಡಿದರು. ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆ ಮುಖಂಡರುಗಳಾದ ಕೇಶವ ಎಂ.ಕೆ ಕುದ್ಮಾನು, ಪುರಂದರ ಗೌಡ ನಂದಿಕಾಡು, ಜಯವರ್ಮ ಗೌಡ ಕಲ್ಬೆಟ್ಟು,ದಿನೇಶ್ ಗೌಡ ಕಜಕ್ಕೆ, ಸಚಿನ್ ಗೌಡ ಬದ್ಲಾಯಿ, ಶ್ರೀನಿವಾಸ ಗೌಡ ಪಾಡಿಗೆರೆ, ಸಂದೀಪ್ ಗೌಡ ಶೆಟ್ಟಿಹಿತ್ತಿಲು,ಪುನೀತ್ ಗೌಡ ಬಾಲೆಹಿತ್ತಿಲು, ಶಿವರಾಮ ಗೌಡ ವಿದ್ಯಾನಗರ, ಅರುಣ್ ಕೆರೆಕೋಡಿ, ಸುಧೀಶ್ ಗೌಡ ಧರ್ಕಸು,ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya
error: Content is protected !!