September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಯುವ ಬಂಟರ ಹಾಗೂ ಮಹಿಳಾ ಬಂಟರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಎ.27 ರಂದು ಗುರುವಾಯನಕೆರೆಯ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಲಿದೆ.

ಈ ಕ್ರೀಡೋತ್ಸವದಲ್ಲಿ ಪಥಸಂಚಲನವು ವಿಶೇಷ ಆಕರ್ಷಣೆಯಾಗಿದ್ದು, ಬೆಳಿಗ್ಗೆ 9 ಗಂಟೆಗೆ ನವಶಕ್ತಿ ಕ್ರೀಡಾಂಗಣದಲ್ಲಿ 9 ವಲಯಗಳ ಕ್ರೀಡಾಳುಗಳು ಮತ್ತು ಬಂಟ ಸಮುದಾಯದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿಸ್ತುಬದ್ಧ ಮತ್ತು ಆಕರ್ಶಕವಾಗಿ ಪಥ ಸಂಚಲನ ನಡೆಸಿಕೊಟ್ಟ ತಂಡಗಳಿಗೆ ಹಾಗೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಂಡ ವಲಯಗಳಿಗೆ ಬಹುಮಾನ ನೀಡಲಾಗುತ್ತದೆ. ಕ್ರೀಡೋತ್ಸವದಲ್ಲಿ 6 ವರ್ಷದ ಒಳಗಿನ ಬಾಲಕ/ಬಾಲಕಿಯರಿಗೆ 50 ಮೀ ಓಟ, ಚೆಂಡು ಎಸೆತ, ಕಪ್ಪೆ ಜಿಗಿತ, 12 ವರ್ಗದ ಒಳಗಿನ ಬಾಲಕ/ಬಾಲಕಿಯರಿಗೆ 80 ಮೀ ಓಟ, ಚೆಂಡು ಎಸೆತ, ಲಿಂಬೆ ಚಮಚ, 17 ವರ್ಷದ ಒಳಗಿನ ಬಾಲಕ / ಬಾಲಕಿಯರಿಗೆ 100, 200, 40 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (18 ರಿಂದ 40 ವರ್ಷ) 100ಮೀ ಓಟ, 200ಮೀ ಓಟ, ಗುಂಡೆಸೆತ, 60 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (41ರಿಂದ 60ವರ್ಷ) 100ಮೀ ಓಟ, 200ಮೀ ವೇಗದ ನಡಿಗೆ, ಗುಂಡೆಸೆತ, 60 ವರ್ಷ ಮೇಲ್ಪಟ್ಟ ಹಿರಿಯರಿಗೆ (ಪುರುಷರು/ ಮಹಿಳೆಯರು): 100 ಮೀ ವೇಗದ ನಡಿಗೆ, ಗುಂಡೆಸೆತ, ಪುರುಷರಿಗೆ ವಾಲಿಬಾಲ್ (6+1), ಮಹಿಳೆಯರಿಗೆ ತ್ರೋಬಾಲ್ (9+1), ಹಗ್ಗ ಜಗ್ಗಾಟ (9+2) ಇರುವುದು. ವಿಜೇತರಿಗೆ ದೇವು ಪೂಂಜ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಬಂಟರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya

ತ್ವೈಬಾ ಮರ್ಕಝ್ ಮೂಡಬಿದ್ರೆ ಧಾರ್ಮಿಕ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!