23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಯುವ ಬಂಟರ ಹಾಗೂ ಮಹಿಳಾ ಬಂಟರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಎ.27 ರಂದು ಗುರುವಾಯನಕೆರೆಯ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಲಿದೆ.

ಈ ಕ್ರೀಡೋತ್ಸವದಲ್ಲಿ ಪಥಸಂಚಲನವು ವಿಶೇಷ ಆಕರ್ಷಣೆಯಾಗಿದ್ದು, ಬೆಳಿಗ್ಗೆ 9 ಗಂಟೆಗೆ ನವಶಕ್ತಿ ಕ್ರೀಡಾಂಗಣದಲ್ಲಿ 9 ವಲಯಗಳ ಕ್ರೀಡಾಳುಗಳು ಮತ್ತು ಬಂಟ ಸಮುದಾಯದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿಸ್ತುಬದ್ಧ ಮತ್ತು ಆಕರ್ಶಕವಾಗಿ ಪಥ ಸಂಚಲನ ನಡೆಸಿಕೊಟ್ಟ ತಂಡಗಳಿಗೆ ಹಾಗೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಂಡ ವಲಯಗಳಿಗೆ ಬಹುಮಾನ ನೀಡಲಾಗುತ್ತದೆ. ಕ್ರೀಡೋತ್ಸವದಲ್ಲಿ 6 ವರ್ಷದ ಒಳಗಿನ ಬಾಲಕ/ಬಾಲಕಿಯರಿಗೆ 50 ಮೀ ಓಟ, ಚೆಂಡು ಎಸೆತ, ಕಪ್ಪೆ ಜಿಗಿತ, 12 ವರ್ಗದ ಒಳಗಿನ ಬಾಲಕ/ಬಾಲಕಿಯರಿಗೆ 80 ಮೀ ಓಟ, ಚೆಂಡು ಎಸೆತ, ಲಿಂಬೆ ಚಮಚ, 17 ವರ್ಷದ ಒಳಗಿನ ಬಾಲಕ / ಬಾಲಕಿಯರಿಗೆ 100, 200, 40 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (18 ರಿಂದ 40 ವರ್ಷ) 100ಮೀ ಓಟ, 200ಮೀ ಓಟ, ಗುಂಡೆಸೆತ, 60 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (41ರಿಂದ 60ವರ್ಷ) 100ಮೀ ಓಟ, 200ಮೀ ವೇಗದ ನಡಿಗೆ, ಗುಂಡೆಸೆತ, 60 ವರ್ಷ ಮೇಲ್ಪಟ್ಟ ಹಿರಿಯರಿಗೆ (ಪುರುಷರು/ ಮಹಿಳೆಯರು): 100 ಮೀ ವೇಗದ ನಡಿಗೆ, ಗುಂಡೆಸೆತ, ಪುರುಷರಿಗೆ ವಾಲಿಬಾಲ್ (6+1), ಮಹಿಳೆಯರಿಗೆ ತ್ರೋಬಾಲ್ (9+1), ಹಗ್ಗ ಜಗ್ಗಾಟ (9+2) ಇರುವುದು. ವಿಜೇತರಿಗೆ ದೇವು ಪೂಂಜ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಬಂಟರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya
error: Content is protected !!