July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಯುವ ಬಂಟರ ಹಾಗೂ ಮಹಿಳಾ ಬಂಟರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಎ.27 ರಂದು ಗುರುವಾಯನಕೆರೆಯ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಲಿದೆ.

ಈ ಕ್ರೀಡೋತ್ಸವದಲ್ಲಿ ಪಥಸಂಚಲನವು ವಿಶೇಷ ಆಕರ್ಷಣೆಯಾಗಿದ್ದು, ಬೆಳಿಗ್ಗೆ 9 ಗಂಟೆಗೆ ನವಶಕ್ತಿ ಕ್ರೀಡಾಂಗಣದಲ್ಲಿ 9 ವಲಯಗಳ ಕ್ರೀಡಾಳುಗಳು ಮತ್ತು ಬಂಟ ಸಮುದಾಯದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿಸ್ತುಬದ್ಧ ಮತ್ತು ಆಕರ್ಶಕವಾಗಿ ಪಥ ಸಂಚಲನ ನಡೆಸಿಕೊಟ್ಟ ತಂಡಗಳಿಗೆ ಹಾಗೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಂಡ ವಲಯಗಳಿಗೆ ಬಹುಮಾನ ನೀಡಲಾಗುತ್ತದೆ. ಕ್ರೀಡೋತ್ಸವದಲ್ಲಿ 6 ವರ್ಷದ ಒಳಗಿನ ಬಾಲಕ/ಬಾಲಕಿಯರಿಗೆ 50 ಮೀ ಓಟ, ಚೆಂಡು ಎಸೆತ, ಕಪ್ಪೆ ಜಿಗಿತ, 12 ವರ್ಗದ ಒಳಗಿನ ಬಾಲಕ/ಬಾಲಕಿಯರಿಗೆ 80 ಮೀ ಓಟ, ಚೆಂಡು ಎಸೆತ, ಲಿಂಬೆ ಚಮಚ, 17 ವರ್ಷದ ಒಳಗಿನ ಬಾಲಕ / ಬಾಲಕಿಯರಿಗೆ 100, 200, 40 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (18 ರಿಂದ 40 ವರ್ಷ) 100ಮೀ ಓಟ, 200ಮೀ ಓಟ, ಗುಂಡೆಸೆತ, 60 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (41ರಿಂದ 60ವರ್ಷ) 100ಮೀ ಓಟ, 200ಮೀ ವೇಗದ ನಡಿಗೆ, ಗುಂಡೆಸೆತ, 60 ವರ್ಷ ಮೇಲ್ಪಟ್ಟ ಹಿರಿಯರಿಗೆ (ಪುರುಷರು/ ಮಹಿಳೆಯರು): 100 ಮೀ ವೇಗದ ನಡಿಗೆ, ಗುಂಡೆಸೆತ, ಪುರುಷರಿಗೆ ವಾಲಿಬಾಲ್ (6+1), ಮಹಿಳೆಯರಿಗೆ ತ್ರೋಬಾಲ್ (9+1), ಹಗ್ಗ ಜಗ್ಗಾಟ (9+2) ಇರುವುದು. ವಿಜೇತರಿಗೆ ದೇವು ಪೂಂಜ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಬಂಟರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!