24.1 C
ಪುತ್ತೂರು, ಬೆಳ್ತಂಗಡಿ
June 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

ಸುಲ್ಕೇರಿ: ಸುಲ್ಕೇರಿ ನರ್ಸರಿ ಬಳಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ ಹೊಡೆದು ಟಾಟಾ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ.24 ರಂದು ರಾತ್ರಿ ನಡೆದಿದೆ.

ಎ.24 ರಂದು ರಾತ್ರಿ ಬೆಳ್ತಂಗಡಿ ತಾಲೂಕು ಸುಲ್ಕೇರಿ ಗ್ರಾಮದ ಸುಲ್ಕೇರಿ ನರ್ಸರಿ ಬಳಿ ಗುರುವಾಯನಕೆರೆ – ನಾರಾವಿ – ಕಾರ್ಕಳ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಗುರುವಾಯನಕೆರೆ ಕಡೆಯಿಂದ ಈಚರ್ ಲಾರಿಯ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೇಲೆ ರಸ್ತೆಯ ಬಲಬದಿಗೆ ಚಲಾಯಿಸಿ ನಾರಾವಿ ಕಡೆಯಿಂದ ಗಣೇಶ್ ಗೌಡ ರವರು ಚಲಾಯಿಸಿಕೊಂಡು ಬರುತ್ತಿದ್ದ ಟಾಟಾ 407 ಗೂಡ್ಸ್ ವಾಹನ ಕ್ಕೆ ಬಲಬದಿ ಚಾಲಕನ ಡೋರ್‌ ಬಳಿಗೆ ರಭಸದಿಂದ ಡಿಕ್ಕಿ ಹೊಡೆದು ಅಪಘಾತ ಉಂಟುಮಾಡಿ ಬಳಿಕ ಈಚರ್ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದು, ಅಪಘಾತದಿಂದ ಗಣೇಶ್ ಗೌಡ ರವರ ವಾಹನ ಜಖಂಗೊಂಡಿದ್ದು, ಗಣೇಶ್ ಗೌಡ ರವರ ಸೊಂಟಕ್ಕೆ, ಬಲಕಾಲಿಗೆ ಗುದ್ದಿದ ಗಾಯಗಳಾಗಿ ಉಜಿರೆ ಬೆನಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya
error: Content is protected !!