23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

ಗುರುವಾಯನಕೆರೆ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಪದವಿ ಪೂರ್ವ ಶಿಕ್ಷಣದಲ್ಲಿ ರಾಜ್ಯ – ರಾಷ್ಟ್ರಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಈ ಶೈಕ್ಷಣಿಕ ವರ್ಷದಿಂದ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಆಂಗ್ಲ ಮಾಧ್ಯಮದ ಒಂದನೆಯ ತರಗತಿ ಪ್ರಾರಂಭಗೊಳ್ಳಲಿದೆ.

ಆಯಾ ಕ್ಷೇತ್ರಗಳಲ್ಲಿ 20 ವರ್ಷಗಳಿಗೂ ಮೀರಿದ ಅನುಭವ ಇರುವ ಶಿಕ್ಷಕರು ಬೋಧಿಸಲಿದ್ದಾರೆ. ಆಕರ್ಷಕ ತರಗತಿ ಕೋಣೆ, ಮಕ್ಕಳ ವಯೋಮಾನಕ್ಕೆ ಸೂಕ್ತ ಪೀಠೋಪಕರಣಗಳು,ಆಟಿಕೆ ವಸ್ತುಗಳು,ಆಟದೊಂದಿಗೆ ಪಾಠ, ಆಂಗ್ಲ ಭಾಷಾ ಪ್ರಾವೀಣ್ಯತೆ, ಭಾರತೀಯ ಸಂಸ್ಕೃತಿಯ ಮೈಗೊಡಿಸುವಿಕೆ, ನಾಡು – ನುಡಿಯ ಅಭಿಮಾನ ಸೇರಿದಂತೆ ಮಗುವಿನ ಸರ್ವತೋಮುಖ ಬೆಳವಣಿಗೆಯೆ ಧ್ಯೇಯವಾಗಿ ಶಾಲೆ ನಿರಂತರ ಚಟುವಟಿಕೆಯ ಕೇಂದ್ರವಾಗಿ ಮುನ್ನಡೆಯಲಿದೆ .

ಬೆಳ್ತಂಗಡಿ ಹಾಗೂ ಆಸುಪಾಸಿನ ಹೆತ್ತವರ ಬೇಡಿಕೆಗೆ ಸ್ಪಂದಿಸಿ, ವೇಣೂರಿನಲ್ಲಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುವುದರ ಜೊತೆಗೆ, ಗುರುವಾಯನಕೆರೆಯಲ್ಲೂ ನೂತನ ಶಾಲೆ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9880899769 , 9900626441 ಸಂಪರ್ಕಿಸಲು ಕೋರಲಾಗಿದೆ.

Related posts

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ – ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಷೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ: ಪ್ರಸಾದ್ ಶೆಟ್ಟಿ ಎಣಿಂಜೆ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

Suddi Udaya
error: Content is protected !!