April 27, 2025
Uncategorized

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

ಗುರುವಾಯನಕೆರೆ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಪದವಿ ಪೂರ್ವ ಶಿಕ್ಷಣದಲ್ಲಿ ರಾಜ್ಯ – ರಾಷ್ಟ್ರಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಈ ಶೈಕ್ಷಣಿಕ ವರ್ಷದಿಂದ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಆಂಗ್ಲ ಮಾಧ್ಯಮದ ಒಂದನೆಯ ತರಗತಿ ಪ್ರಾರಂಭಗೊಳ್ಳಲಿದೆ.

ಆಯಾ ಕ್ಷೇತ್ರಗಳಲ್ಲಿ 20 ವರ್ಷಗಳಿಗೂ ಮೀರಿದ ಅನುಭವ ಇರುವ ಶಿಕ್ಷಕರು ಬೋಧಿಸಲಿದ್ದಾರೆ. ಆಕರ್ಷಕ ತರಗತಿ ಕೋಣೆ, ಮಕ್ಕಳ ವಯೋಮಾನಕ್ಕೆ ಸೂಕ್ತ ಪೀಠೋಪಕರಣಗಳು,ಆಟಿಕೆ ವಸ್ತುಗಳು,ಆಟದೊಂದಿಗೆ ಪಾಠ, ಆಂಗ್ಲ ಭಾಷಾ ಪ್ರಾವೀಣ್ಯತೆ, ಭಾರತೀಯ ಸಂಸ್ಕೃತಿಯ ಮೈಗೊಡಿಸುವಿಕೆ, ನಾಡು – ನುಡಿಯ ಅಭಿಮಾನ ಸೇರಿದಂತೆ ಮಗುವಿನ ಸರ್ವತೋಮುಖ ಬೆಳವಣಿಗೆಯೆ ಧ್ಯೇಯವಾಗಿ ಶಾಲೆ ನಿರಂತರ ಚಟುವಟಿಕೆಯ ಕೇಂದ್ರವಾಗಿ ಮುನ್ನಡೆಯಲಿದೆ .

ಬೆಳ್ತಂಗಡಿ ಹಾಗೂ ಆಸುಪಾಸಿನ ಹೆತ್ತವರ ಬೇಡಿಕೆಗೆ ಸ್ಪಂದಿಸಿ, ವೇಣೂರಿನಲ್ಲಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುವುದರ ಜೊತೆಗೆ, ಗುರುವಾಯನಕೆರೆಯಲ್ಲೂ ನೂತನ ಶಾಲೆ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9880899769 , 9900626441 ಸಂಪರ್ಕಿಸಲು ಕೋರಲಾಗಿದೆ.

Related posts

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya
error: Content is protected !!