23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

ಗುರುವಾಯನಕೆರೆ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಪದವಿ ಪೂರ್ವ ಶಿಕ್ಷಣದಲ್ಲಿ ರಾಜ್ಯ – ರಾಷ್ಟ್ರಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಈ ಶೈಕ್ಷಣಿಕ ವರ್ಷದಿಂದ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಆಂಗ್ಲ ಮಾಧ್ಯಮದ ಒಂದನೆಯ ತರಗತಿ ಪ್ರಾರಂಭಗೊಳ್ಳಲಿದೆ.

ಆಯಾ ಕ್ಷೇತ್ರಗಳಲ್ಲಿ 20 ವರ್ಷಗಳಿಗೂ ಮೀರಿದ ಅನುಭವ ಇರುವ ಶಿಕ್ಷಕರು ಬೋಧಿಸಲಿದ್ದಾರೆ. ಆಕರ್ಷಕ ತರಗತಿ ಕೋಣೆ, ಮಕ್ಕಳ ವಯೋಮಾನಕ್ಕೆ ಸೂಕ್ತ ಪೀಠೋಪಕರಣಗಳು,ಆಟಿಕೆ ವಸ್ತುಗಳು,ಆಟದೊಂದಿಗೆ ಪಾಠ, ಆಂಗ್ಲ ಭಾಷಾ ಪ್ರಾವೀಣ್ಯತೆ, ಭಾರತೀಯ ಸಂಸ್ಕೃತಿಯ ಮೈಗೊಡಿಸುವಿಕೆ, ನಾಡು – ನುಡಿಯ ಅಭಿಮಾನ ಸೇರಿದಂತೆ ಮಗುವಿನ ಸರ್ವತೋಮುಖ ಬೆಳವಣಿಗೆಯೆ ಧ್ಯೇಯವಾಗಿ ಶಾಲೆ ನಿರಂತರ ಚಟುವಟಿಕೆಯ ಕೇಂದ್ರವಾಗಿ ಮುನ್ನಡೆಯಲಿದೆ .

ಬೆಳ್ತಂಗಡಿ ಹಾಗೂ ಆಸುಪಾಸಿನ ಹೆತ್ತವರ ಬೇಡಿಕೆಗೆ ಸ್ಪಂದಿಸಿ, ವೇಣೂರಿನಲ್ಲಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುವುದರ ಜೊತೆಗೆ, ಗುರುವಾಯನಕೆರೆಯಲ್ಲೂ ನೂತನ ಶಾಲೆ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9880899769 , 9900626441 ಸಂಪರ್ಕಿಸಲು ಕೋರಲಾಗಿದೆ.

Related posts

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಸೆ.14-21: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇಲೈಸಲಿದೆ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಿಲ್ಲದ ಕಾಡುಪ್ರಾಣಿಗಳ ಬೇಟೆ

Suddi Udaya

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya
error: Content is protected !!