September 6, 2026
Uncategorized

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

ಗುರುವಾಯನಕೆರೆ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಪದವಿ ಪೂರ್ವ ಶಿಕ್ಷಣದಲ್ಲಿ ರಾಜ್ಯ – ರಾಷ್ಟ್ರಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಈ ಶೈಕ್ಷಣಿಕ ವರ್ಷದಿಂದ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಆಂಗ್ಲ ಮಾಧ್ಯಮದ ಒಂದನೆಯ ತರಗತಿ ಪ್ರಾರಂಭಗೊಳ್ಳಲಿದೆ.

ಆಯಾ ಕ್ಷೇತ್ರಗಳಲ್ಲಿ 20 ವರ್ಷಗಳಿಗೂ ಮೀರಿದ ಅನುಭವ ಇರುವ ಶಿಕ್ಷಕರು ಬೋಧಿಸಲಿದ್ದಾರೆ. ಆಕರ್ಷಕ ತರಗತಿ ಕೋಣೆ, ಮಕ್ಕಳ ವಯೋಮಾನಕ್ಕೆ ಸೂಕ್ತ ಪೀಠೋಪಕರಣಗಳು,ಆಟಿಕೆ ವಸ್ತುಗಳು,ಆಟದೊಂದಿಗೆ ಪಾಠ, ಆಂಗ್ಲ ಭಾಷಾ ಪ್ರಾವೀಣ್ಯತೆ, ಭಾರತೀಯ ಸಂಸ್ಕೃತಿಯ ಮೈಗೊಡಿಸುವಿಕೆ, ನಾಡು – ನುಡಿಯ ಅಭಿಮಾನ ಸೇರಿದಂತೆ ಮಗುವಿನ ಸರ್ವತೋಮುಖ ಬೆಳವಣಿಗೆಯೆ ಧ್ಯೇಯವಾಗಿ ಶಾಲೆ ನಿರಂತರ ಚಟುವಟಿಕೆಯ ಕೇಂದ್ರವಾಗಿ ಮುನ್ನಡೆಯಲಿದೆ .

ಬೆಳ್ತಂಗಡಿ ಹಾಗೂ ಆಸುಪಾಸಿನ ಹೆತ್ತವರ ಬೇಡಿಕೆಗೆ ಸ್ಪಂದಿಸಿ, ವೇಣೂರಿನಲ್ಲಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುವುದರ ಜೊತೆಗೆ, ಗುರುವಾಯನಕೆರೆಯಲ್ಲೂ ನೂತನ ಶಾಲೆ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9880899769 , 9900626441 ಸಂಪರ್ಕಿಸಲು ಕೋರಲಾಗಿದೆ.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನ ಲೋಕಾರ್ಪಣೆ ‌ -ದೀಪ ಬೆಳಗಿಸಿ ಆಶೀರ್ವಾದಿಸಿದ ಲೋಕಪಾ೯ಣೆಗೊಳಿಸಿದಶ್ರೀ ಮಜ್ಜದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ‌ ‌ -ಸಮಾಜ ಬಾಂಧವರಿಂದ ಶೃಂಗೇರಿ ಮಠಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಮೂಲಕ ಹುಂಡಿ ಹಣ ಸಮರ್ಪಣೆ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!