23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

ಗುರುವಾಯನಕೆರೆ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಪದವಿ ಪೂರ್ವ ಶಿಕ್ಷಣದಲ್ಲಿ ರಾಜ್ಯ – ರಾಷ್ಟ್ರಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಈ ಶೈಕ್ಷಣಿಕ ವರ್ಷದಿಂದ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಆಂಗ್ಲ ಮಾಧ್ಯಮದ ಒಂದನೆಯ ತರಗತಿ ಪ್ರಾರಂಭಗೊಳ್ಳಲಿದೆ.

ಆಯಾ ಕ್ಷೇತ್ರಗಳಲ್ಲಿ 20 ವರ್ಷಗಳಿಗೂ ಮೀರಿದ ಅನುಭವ ಇರುವ ಶಿಕ್ಷಕರು ಬೋಧಿಸಲಿದ್ದಾರೆ. ಆಕರ್ಷಕ ತರಗತಿ ಕೋಣೆ, ಮಕ್ಕಳ ವಯೋಮಾನಕ್ಕೆ ಸೂಕ್ತ ಪೀಠೋಪಕರಣಗಳು,ಆಟಿಕೆ ವಸ್ತುಗಳು,ಆಟದೊಂದಿಗೆ ಪಾಠ, ಆಂಗ್ಲ ಭಾಷಾ ಪ್ರಾವೀಣ್ಯತೆ, ಭಾರತೀಯ ಸಂಸ್ಕೃತಿಯ ಮೈಗೊಡಿಸುವಿಕೆ, ನಾಡು – ನುಡಿಯ ಅಭಿಮಾನ ಸೇರಿದಂತೆ ಮಗುವಿನ ಸರ್ವತೋಮುಖ ಬೆಳವಣಿಗೆಯೆ ಧ್ಯೇಯವಾಗಿ ಶಾಲೆ ನಿರಂತರ ಚಟುವಟಿಕೆಯ ಕೇಂದ್ರವಾಗಿ ಮುನ್ನಡೆಯಲಿದೆ .

ಬೆಳ್ತಂಗಡಿ ಹಾಗೂ ಆಸುಪಾಸಿನ ಹೆತ್ತವರ ಬೇಡಿಕೆಗೆ ಸ್ಪಂದಿಸಿ, ವೇಣೂರಿನಲ್ಲಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುವುದರ ಜೊತೆಗೆ, ಗುರುವಾಯನಕೆರೆಯಲ್ಲೂ ನೂತನ ಶಾಲೆ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9880899769 , 9900626441 ಸಂಪರ್ಕಿಸಲು ಕೋರಲಾಗಿದೆ.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ: ಜಿಲ್ಲಾ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ : ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ಭಾಗಶಃ ಅಂಗಡಿ-ಮುಂಗಟ್ಟುಗಳು ಬಂದ್

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ : ಸದಸ್ಯರಿಗೆ ಶೇಕಡಾ 20 ರಷ್ಟು ಲಾಭಾಂಶವನ್ನು ಘೋಷಿಸಿದ ಅಧ್ಯಕ್ಷ ಜಯಕೀತಿ೯ ಜೈನ್

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!