July 23, 2026
Uncategorized

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

ಗುರುವಾಯನಕೆರೆ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಪದವಿ ಪೂರ್ವ ಶಿಕ್ಷಣದಲ್ಲಿ ರಾಜ್ಯ – ರಾಷ್ಟ್ರಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಈ ಶೈಕ್ಷಣಿಕ ವರ್ಷದಿಂದ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಆಂಗ್ಲ ಮಾಧ್ಯಮದ ಒಂದನೆಯ ತರಗತಿ ಪ್ರಾರಂಭಗೊಳ್ಳಲಿದೆ.

ಆಯಾ ಕ್ಷೇತ್ರಗಳಲ್ಲಿ 20 ವರ್ಷಗಳಿಗೂ ಮೀರಿದ ಅನುಭವ ಇರುವ ಶಿಕ್ಷಕರು ಬೋಧಿಸಲಿದ್ದಾರೆ. ಆಕರ್ಷಕ ತರಗತಿ ಕೋಣೆ, ಮಕ್ಕಳ ವಯೋಮಾನಕ್ಕೆ ಸೂಕ್ತ ಪೀಠೋಪಕರಣಗಳು,ಆಟಿಕೆ ವಸ್ತುಗಳು,ಆಟದೊಂದಿಗೆ ಪಾಠ, ಆಂಗ್ಲ ಭಾಷಾ ಪ್ರಾವೀಣ್ಯತೆ, ಭಾರತೀಯ ಸಂಸ್ಕೃತಿಯ ಮೈಗೊಡಿಸುವಿಕೆ, ನಾಡು – ನುಡಿಯ ಅಭಿಮಾನ ಸೇರಿದಂತೆ ಮಗುವಿನ ಸರ್ವತೋಮುಖ ಬೆಳವಣಿಗೆಯೆ ಧ್ಯೇಯವಾಗಿ ಶಾಲೆ ನಿರಂತರ ಚಟುವಟಿಕೆಯ ಕೇಂದ್ರವಾಗಿ ಮುನ್ನಡೆಯಲಿದೆ .

ಬೆಳ್ತಂಗಡಿ ಹಾಗೂ ಆಸುಪಾಸಿನ ಹೆತ್ತವರ ಬೇಡಿಕೆಗೆ ಸ್ಪಂದಿಸಿ, ವೇಣೂರಿನಲ್ಲಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುವುದರ ಜೊತೆಗೆ, ಗುರುವಾಯನಕೆರೆಯಲ್ಲೂ ನೂತನ ಶಾಲೆ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9880899769 , 9900626441 ಸಂಪರ್ಕಿಸಲು ಕೋರಲಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya

ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ :ಕೇಸು ದಾಖಲಿಸಿಕೊಂಡ ಧರ್ಮಸ್ಥಳ ಠಾಣಾ ಪೊಲೀಸರು

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya
error: Content is protected !!