37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಯುವ ಬಂಟರ ಹಾಗೂ ಮಹಿಳಾ ಬಂಟರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಎ.27 ರಂದು ಗುರುವಾಯನಕೆರೆಯ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಲಿದೆ.

ಈ ಕ್ರೀಡೋತ್ಸವದಲ್ಲಿ ಪಥಸಂಚಲನವು ವಿಶೇಷ ಆಕರ್ಷಣೆಯಾಗಿದ್ದು, ಬೆಳಿಗ್ಗೆ 9 ಗಂಟೆಗೆ ನವಶಕ್ತಿ ಕ್ರೀಡಾಂಗಣದಲ್ಲಿ 9 ವಲಯಗಳ ಕ್ರೀಡಾಳುಗಳು ಮತ್ತು ಬಂಟ ಸಮುದಾಯದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿಸ್ತುಬದ್ಧ ಮತ್ತು ಆಕರ್ಶಕವಾಗಿ ಪಥ ಸಂಚಲನ ನಡೆಸಿಕೊಟ್ಟ ತಂಡಗಳಿಗೆ ಹಾಗೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಂಡ ವಲಯಗಳಿಗೆ ಬಹುಮಾನ ನೀಡಲಾಗುತ್ತದೆ. ಕ್ರೀಡೋತ್ಸವದಲ್ಲಿ 6 ವರ್ಷದ ಒಳಗಿನ ಬಾಲಕ/ಬಾಲಕಿಯರಿಗೆ 50 ಮೀ ಓಟ, ಚೆಂಡು ಎಸೆತ, ಕಪ್ಪೆ ಜಿಗಿತ, 12 ವರ್ಗದ ಒಳಗಿನ ಬಾಲಕ/ಬಾಲಕಿಯರಿಗೆ 80 ಮೀ ಓಟ, ಚೆಂಡು ಎಸೆತ, ಲಿಂಬೆ ಚಮಚ, 17 ವರ್ಷದ ಒಳಗಿನ ಬಾಲಕ / ಬಾಲಕಿಯರಿಗೆ 100, 200, 40 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (18 ರಿಂದ 40 ವರ್ಷ) 100ಮೀ ಓಟ, 200ಮೀ ಓಟ, ಗುಂಡೆಸೆತ, 60 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (41ರಿಂದ 60ವರ್ಷ) 100ಮೀ ಓಟ, 200ಮೀ ವೇಗದ ನಡಿಗೆ, ಗುಂಡೆಸೆತ, 60 ವರ್ಷ ಮೇಲ್ಪಟ್ಟ ಹಿರಿಯರಿಗೆ (ಪುರುಷರು/ ಮಹಿಳೆಯರು): 100 ಮೀ ವೇಗದ ನಡಿಗೆ, ಗುಂಡೆಸೆತ, ಪುರುಷರಿಗೆ ವಾಲಿಬಾಲ್ (6+1), ಮಹಿಳೆಯರಿಗೆ ತ್ರೋಬಾಲ್ (9+1), ಹಗ್ಗ ಜಗ್ಗಾಟ (9+2) ಇರುವುದು. ವಿಜೇತರಿಗೆ ದೇವು ಪೂಂಜ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಬಂಟರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya
error: Content is protected !!