24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಯುವ ಬಂಟರ ಹಾಗೂ ಮಹಿಳಾ ಬಂಟರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಎ.27 ರಂದು ಗುರುವಾಯನಕೆರೆಯ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಲಿದೆ.

ಈ ಕ್ರೀಡೋತ್ಸವದಲ್ಲಿ ಪಥಸಂಚಲನವು ವಿಶೇಷ ಆಕರ್ಷಣೆಯಾಗಿದ್ದು, ಬೆಳಿಗ್ಗೆ 9 ಗಂಟೆಗೆ ನವಶಕ್ತಿ ಕ್ರೀಡಾಂಗಣದಲ್ಲಿ 9 ವಲಯಗಳ ಕ್ರೀಡಾಳುಗಳು ಮತ್ತು ಬಂಟ ಸಮುದಾಯದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿಸ್ತುಬದ್ಧ ಮತ್ತು ಆಕರ್ಶಕವಾಗಿ ಪಥ ಸಂಚಲನ ನಡೆಸಿಕೊಟ್ಟ ತಂಡಗಳಿಗೆ ಹಾಗೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಂಡ ವಲಯಗಳಿಗೆ ಬಹುಮಾನ ನೀಡಲಾಗುತ್ತದೆ. ಕ್ರೀಡೋತ್ಸವದಲ್ಲಿ 6 ವರ್ಷದ ಒಳಗಿನ ಬಾಲಕ/ಬಾಲಕಿಯರಿಗೆ 50 ಮೀ ಓಟ, ಚೆಂಡು ಎಸೆತ, ಕಪ್ಪೆ ಜಿಗಿತ, 12 ವರ್ಗದ ಒಳಗಿನ ಬಾಲಕ/ಬಾಲಕಿಯರಿಗೆ 80 ಮೀ ಓಟ, ಚೆಂಡು ಎಸೆತ, ಲಿಂಬೆ ಚಮಚ, 17 ವರ್ಷದ ಒಳಗಿನ ಬಾಲಕ / ಬಾಲಕಿಯರಿಗೆ 100, 200, 40 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (18 ರಿಂದ 40 ವರ್ಷ) 100ಮೀ ಓಟ, 200ಮೀ ಓಟ, ಗುಂಡೆಸೆತ, 60 ವರ್ಷದ ಒಳಗಿನ ಪುರುಷರು/ಮಹಿಳೆಯರಿಗೆ (41ರಿಂದ 60ವರ್ಷ) 100ಮೀ ಓಟ, 200ಮೀ ವೇಗದ ನಡಿಗೆ, ಗುಂಡೆಸೆತ, 60 ವರ್ಷ ಮೇಲ್ಪಟ್ಟ ಹಿರಿಯರಿಗೆ (ಪುರುಷರು/ ಮಹಿಳೆಯರು): 100 ಮೀ ವೇಗದ ನಡಿಗೆ, ಗುಂಡೆಸೆತ, ಪುರುಷರಿಗೆ ವಾಲಿಬಾಲ್ (6+1), ಮಹಿಳೆಯರಿಗೆ ತ್ರೋಬಾಲ್ (9+1), ಹಗ್ಗ ಜಗ್ಗಾಟ (9+2) ಇರುವುದು. ವಿಜೇತರಿಗೆ ದೇವು ಪೂಂಜ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಬಂಟರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
error: Content is protected !!